ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ ಅಂಬೇಡ್ಕರ್ ಭವನ ಬೆಳ್ತಂಗಡಿದಲ್ಲಿ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಬೆವರಿನ ಶ್ರಮದ ದಿಂದ ನಿರ್ಮಾಣವಾಗಿರುವ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರಿಗೆ ಭಾರಿ ರೀತಿಯ ತೊಂದರೆಗಳನ್ನು ಉಂಟು ಮಾಡುತ್ತಿದ್ದಾರೆ ಈ ಕಟ್ಟಡ ಮಂಡಳಿಯ ಹಣವನ್ನು ಕಾರ್ಮಿಕರಿಗೆ ಅಗತ್ಯ ಇಲ್ಲದ ಯೋಜನೆಗಳನ್ನು ತಂದು ಕಾರ್ಮಿಕರ ಬೆವರಿನ ಶ್ರಮದ ಹಣವನ್ನು ಪೋಲು ಮಾಡುತ್ತಿದ್ದಾರೆ ನಾಲ್ಕು ವರ್ಷಗಳಿಂದ ಕಾರ್ಮಿಕರಿಗೆ ಸರಿಯಾಗಿ ಸ್ಕಾಲರ್ಶಿಪುಗಳು ಬರುತ್ತಿಲ್ಲ ವೃದ್ಧಾಪ್ಯ ಪಿಂಚಣಿಗಳು ಬರುತ್ತಿಲ್ಲ ಆಸ್ಪತ್ರೆ ಚಿಕಿತ್ಸಾ ವೆಚ್ಚದಲ್ಲಿ ಕಾರ್ಮಿಕರಿಗೆ ಬಾರಿ ರೀತಿ ಅನ್ಯಾಯವಾಗುತ್ತಿದೆ ಕಾರ್ಮಿಕರಿಗೆ ನೇರ ಪಾವತಿಯಾಗುವ ಯೋಜನೆಗಳನ್ನು ಮಾತ್ರ ತರುವಂತೆ ಮತ್ತು ಕಾರ್ಮಿಕರಿಗೆ ಅಗತ್ಯ ಇಲ್ಲದ ಹೆಲ್ತ್ ಕ್ಯಾಂಪ್ ಗಳು ಟ್ರೈನಿಂಗ್ ಕ್ಯಾಂಪ್ಗಳ್ಳನು ತಂದು ಕಟ್ಟಡ ಮಂಡಳಿಯ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ ಕೇವಲ ಕಾರ್ಮಿಕರಿಗೆ ವಂಚಿಸುವ ಕೆಲಸ ಕಟ್ಟಡ ಮಂಡಳಿಯಿಂದ ಆಗುತ್ತಿದೆ ಈ ಬಗ್ಗೆ ಕಾರ್ಮಿಕರು ಜಾಗೃತಿ ವಹಿಸಬೇಕು ಜುಲೈ 7ರಂದು ಈ ಕುರಿತು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯ ಎದುರು ಬೃಹತ್ ಕಾರ್ಮಿಕ ಜಾಥಾವನ್ನು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಮ್ ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಎಮ್ಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಬಿ ಎಂ ಎಸ್ ನ ಜಿಲ್ಲಾಧ್ಯಕ್ಷರಾದ ವಕೀಲ ರಾದ ಅನಿಲ್ ಕುಮಾರ್ ಬಿಎಂಎಸ್ ನ ತಾಲೂಕು ಅಧ್ಯಕ್ಷರಾದ ವಕೀಲ ಉದಯ್ ಬಿಕೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ