ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ ಅಂಬೇಡ್ಕರ್ ಭವನ ಬೆಳ್ತಂಗಡಿದಲ್ಲಿ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಬೆವರಿನ ಶ್ರಮದ ದಿಂದ ನಿರ್ಮಾಣವಾಗಿರುವ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರಿಗೆ ಭಾರಿ ರೀತಿಯ ತೊಂದರೆಗಳನ್ನು ಉಂಟು ಮಾಡುತ್ತಿದ್ದಾರೆ ಈ ಕಟ್ಟಡ ಮಂಡಳಿಯ ಹಣವನ್ನು ಕಾರ್ಮಿಕರಿಗೆ ಅಗತ್ಯ ಇಲ್ಲದ ಯೋಜನೆಗಳನ್ನು ತಂದು ಕಾರ್ಮಿಕರ ಬೆವರಿನ ಶ್ರಮದ ಹಣವನ್ನು ಪೋಲು ಮಾಡುತ್ತಿದ್ದಾರೆ ನಾಲ್ಕು ವರ್ಷಗಳಿಂದ ಕಾರ್ಮಿಕರಿಗೆ ಸರಿಯಾಗಿ ಸ್ಕಾಲರ್ಶಿಪುಗಳು ಬರುತ್ತಿಲ್ಲ ವೃದ್ಧಾಪ್ಯ ಪಿಂಚಣಿಗಳು ಬರುತ್ತಿಲ್ಲ ಆಸ್ಪತ್ರೆ ಚಿಕಿತ್ಸಾ ವೆಚ್ಚದಲ್ಲಿ ಕಾರ್ಮಿಕರಿಗೆ ಬಾರಿ ರೀತಿ ಅನ್ಯಾಯವಾಗುತ್ತಿದೆ ಕಾರ್ಮಿಕರಿಗೆ ನೇರ ಪಾವತಿಯಾಗುವ ಯೋಜನೆಗಳನ್ನು ಮಾತ್ರ ತರುವಂತೆ ಮತ್ತು ಕಾರ್ಮಿಕರಿಗೆ ಅಗತ್ಯ ಇಲ್ಲದ ಹೆಲ್ತ್ ಕ್ಯಾಂಪ್ ಗಳು ಟ್ರೈನಿಂಗ್ ಕ್ಯಾಂಪ್ಗಳ್ಳನು ತಂದು ಕಟ್ಟಡ ಮಂಡಳಿಯ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ ಕೇವಲ ಕಾರ್ಮಿಕರಿಗೆ ವಂಚಿಸುವ ಕೆಲಸ ಕಟ್ಟಡ ಮಂಡಳಿಯಿಂದ ಆಗುತ್ತಿದೆ ಈ ಬಗ್ಗೆ ಕಾರ್ಮಿಕರು ಜಾಗೃತಿ ವಹಿಸಬೇಕು ಜುಲೈ 7ರಂದು ಈ ಕುರಿತು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯ ಎದುರು ಬೃಹತ್ ಕಾರ್ಮಿಕ ಜಾಥಾವನ್ನು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಮ್ ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಎಮ್ಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಬಿ ಎಂ ಎಸ್ ನ ಜಿಲ್ಲಾಧ್ಯಕ್ಷರಾದ ವಕೀಲ ರಾದ ಅನಿಲ್ ಕುಮಾರ್ ಬಿಎಂಎಸ್ ನ ತಾಲೂಕು ಅಧ್ಯಕ್ಷರಾದ ವಕೀಲ ಉದಯ್ ಬಿಕೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ