ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ ಅಂಬೇಡ್ಕರ್ ಭವನ ಬೆಳ್ತಂಗಡಿದಲ್ಲಿ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು ಈ ಸಂದರ್ಭದಲ್ಲಿ ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಬೆವರಿನ ಶ್ರಮದ ದಿಂದ ನಿರ್ಮಾಣವಾಗಿರುವ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರಿಗೆ ಭಾರಿ ರೀತಿಯ ತೊಂದರೆಗಳನ್ನು ಉಂಟು ಮಾಡುತ್ತಿದ್ದಾರೆ ಈ ಕಟ್ಟಡ ಮಂಡಳಿಯ ಹಣವನ್ನು ಕಾರ್ಮಿಕರಿಗೆ ಅಗತ್ಯ ಇಲ್ಲದ ಯೋಜನೆಗಳನ್ನು ತಂದು ಕಾರ್ಮಿಕರ ಬೆವರಿನ ಶ್ರಮದ ಹಣವನ್ನು ಪೋಲು ಮಾಡುತ್ತಿದ್ದಾರೆ ನಾಲ್ಕು ವರ್ಷಗಳಿಂದ ಕಾರ್ಮಿಕರಿಗೆ ಸರಿಯಾಗಿ ಸ್ಕಾಲರ್ಶಿಪುಗಳು ಬರುತ್ತಿಲ್ಲ ವೃದ್ಧಾಪ್ಯ ಪಿಂಚಣಿಗಳು ಬರುತ್ತಿಲ್ಲ ಆಸ್ಪತ್ರೆ ಚಿಕಿತ್ಸಾ ವೆಚ್ಚದಲ್ಲಿ ಕಾರ್ಮಿಕರಿಗೆ ಬಾರಿ ರೀತಿ ಅನ್ಯಾಯವಾಗುತ್ತಿದೆ ಕಾರ್ಮಿಕರಿಗೆ ನೇರ ಪಾವತಿಯಾಗುವ ಯೋಜನೆಗಳನ್ನು ಮಾತ್ರ ತರುವಂತೆ ಮತ್ತು ಕಾರ್ಮಿಕರಿಗೆ ಅಗತ್ಯ ಇಲ್ಲದ ಹೆಲ್ತ್ ಕ್ಯಾಂಪ್ ಗಳು ಟ್ರೈನಿಂಗ್ ಕ್ಯಾಂಪ್ಗಳ್ಳನು ತಂದು ಕಟ್ಟಡ ಮಂಡಳಿಯ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ ಕೇವಲ ಕಾರ್ಮಿಕರಿಗೆ ವಂಚಿಸುವ ಕೆಲಸ ಕಟ್ಟಡ ಮಂಡಳಿಯಿಂದ ಆಗುತ್ತಿದೆ ಈ ಬಗ್ಗೆ ಕಾರ್ಮಿಕರು ಜಾಗೃತಿ ವಹಿಸಬೇಕು ಜುಲೈ 7ರಂದು ಈ ಕುರಿತು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಕಚೇರಿಯ ಎದುರು ಬೃಹತ್ ಕಾರ್ಮಿಕ ಜಾಥಾವನ್ನು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಮ್ ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತ ಪರಿಹರಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಎಮ್ಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಬಿ ಎಂ ಎಸ್ ನ ಜಿಲ್ಲಾಧ್ಯಕ್ಷರಾದ ವಕೀಲ ರಾದ ಅನಿಲ್ ಕುಮಾರ್ ಬಿಎಂಎಸ್ ನ ತಾಲೂಕು ಅಧ್ಯಕ್ಷರಾದ ವಕೀಲ ಉದಯ್ ಬಿಕೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    You Missed

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 44 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 131 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 141 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 40 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 46 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ