ಬೆಳ್ತಂಗಡಿ ತಾಲೂಕಿನಾಧ್ಯಂತ ಇನ್ನು 15 ದಿನಗಳ ಕಾಲ ಅಪರಾಹ್ನ 2pm ನಂತರ ಸ್ವಯಂ ಲಾಕ್ ಡೌನ್!

ಬೆಳ್ತಂಗಡಿ: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು 48 ಗ್ರಾ.ಪಂ ವ್ಯಾಪ್ತಿಗಳ ಪ್ರತಿನಿಧಿ ಜೊತೆ ಸಮಾಲೋಚನಾ ಸಭೆ ಜು.11 ರಂದು ಎಸ್.ಡಿ.ಎಮ್ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ತಾಲೂಕನ್ನು ಕೊರೋನಾ ಮುಕ್ತ ತಾಲೂಕು ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಯತ್ನ ಅಗತ್ಯ. ಕೊರೋನಾ ಹೆಚ್ಚಾಗದಂತೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿ ಬೂತ್ ನಲ್ಲಿ ಕೊರೋನಾ ಸೈನಿಕರ ತಂಡವನ್ನು ರಚಿಸಬೇಕು, ತಾಲೂಕಿನಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸಬೇಕು ಎಂದು ತಿಳಿಸಿದರು.

ಶೇಕಡ 90 ಜನರ ಅಭಿಪ್ರಾಯ ಮದ್ಯಾಹ್ನ 2ಗಂಟೆವರೆಗೆ ಮಾತ್ರ ಅಂಗಡಿ ಗಳನ್ನು ತೆರೆಯುವುದು ಎಂಬ ತಿರ್ಮಾನ ವ್ಯಕ್ತವಾಯ್ತು. ಹಾಗೂ ತಾಲೂಕಿನ 9 ಖಾಸಗಿ ಆಸ್ಪತ್ರೆ ಗಳು ಇನ್ನೂ ಮುಂದಕ್ಕೆ ಮದ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಿಗ್ಗೆ 8 ಗಂಟೆವರೆಗೆ ಹೊರ ರೋಗಿ ವಿಭಾಗ ಲಬ್ಯವಿರುವುದಿಲ್ಲ ಮತ್ತು ತುರ್ತು ಸೇವೆ,ಅಪಘಾತ ವಿಭಾಗ, ನೊಂದಾವಣೆ ವಿಬಾಗಗಳು ಎಂದಿನಂತೆ 24ಗಂಟೆ ಕರ್ತವ್ಯ ನಿರ್ವಹಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಶಾಸಕರು ಎಲ್ಲರ ಅಭಿಪ್ರಾಯ ಕ್ರೂಡಿಕರಿಸಿ ಇನ್ನೂ ಮುಂದೆ 15 ದಿನಗಳ ಮದ್ಯಾಹ್ನ 2 ಗಂಟೆಯ ನಂತರ ಸ್ವಯಂ ಘೋಷಿತ ಲಾಕ್ ಡೌನ್ ಎಂಬ ತಿರ್ಮಾನ ಕೈಗೊಂಡು ಈ ಲಾಕ್ ಡೌನ್ ಯಾವುದೆ ಒತ್ತಾಯ ಪೂರ್ವಕ ಅಲ್ಲ ಬದಲಿಗೆ ಜನ ಜಾಗೃತಿ ಅಭಿಯಾನ ವಾಗಿ ಕೊರೊನ ನಿಯಂತ್ರಣ ಮಾಡುವಲ್ಲಿ ನಿರ್ಣಯ ಮಾಡೋಣ ಎಂಬ ಜನರ ಒಕ್ಕೊರೊಲಿನ ಜನ ದ್ವನಿಯಾಗಿ ಶಾಸಕ ನೆಲೆಯಲ್ಲಿ ಜನಾಭಿಪ್ರಾಯವನ್ನು ಘೋಷಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಮಹೇಶ್ ಜೆ, ಕಾರ್ಯನಿರ್ವಾಹಣಾಧಿಕಾರಿ ಜಯರಾಮ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಜಿ.ಪಂ ಸದಸ್ಯ ಕೊರಗಪ್ಪ, ಆರೋಗ್ಯಾಧಿಕಾರಿ ಡಾ.ಕಲಾಮಧು ಉಪಸ್ಥಿತರಿದ್ದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ನಿಂದ ತಲಾ ಇಬ್ಬರು ಪ್ರತಿನಿಧಿಗಳು, ನ.ಪಂ, ತಾ.ಪಂ, ಜಿ.ಪಂ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

Spread the love
  • Related Posts

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ ವಿದ್ಯಾ ಸಾಗರ…

    Spread the love

    You Missed

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 38 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 36 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 33 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 67 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 37 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 35 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ