ಬೆಳ್ತಂಗಡಿ ತಾಲೂಕಿನಾಧ್ಯಂತ ಇನ್ನು 15 ದಿನಗಳ ಕಾಲ ಅಪರಾಹ್ನ 2pm ನಂತರ ಸ್ವಯಂ ಲಾಕ್ ಡೌನ್!

ಬೆಳ್ತಂಗಡಿ: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು 48 ಗ್ರಾ.ಪಂ ವ್ಯಾಪ್ತಿಗಳ ಪ್ರತಿನಿಧಿ ಜೊತೆ ಸಮಾಲೋಚನಾ ಸಭೆ ಜು.11 ರಂದು ಎಸ್.ಡಿ.ಎಮ್ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ತಾಲೂಕನ್ನು ಕೊರೋನಾ ಮುಕ್ತ ತಾಲೂಕು ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಯತ್ನ ಅಗತ್ಯ. ಕೊರೋನಾ ಹೆಚ್ಚಾಗದಂತೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿ ಬೂತ್ ನಲ್ಲಿ ಕೊರೋನಾ ಸೈನಿಕರ ತಂಡವನ್ನು ರಚಿಸಬೇಕು, ತಾಲೂಕಿನಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸಬೇಕು ಎಂದು ತಿಳಿಸಿದರು.

ಶೇಕಡ 90 ಜನರ ಅಭಿಪ್ರಾಯ ಮದ್ಯಾಹ್ನ 2ಗಂಟೆವರೆಗೆ ಮಾತ್ರ ಅಂಗಡಿ ಗಳನ್ನು ತೆರೆಯುವುದು ಎಂಬ ತಿರ್ಮಾನ ವ್ಯಕ್ತವಾಯ್ತು. ಹಾಗೂ ತಾಲೂಕಿನ 9 ಖಾಸಗಿ ಆಸ್ಪತ್ರೆ ಗಳು ಇನ್ನೂ ಮುಂದಕ್ಕೆ ಮದ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಿಗ್ಗೆ 8 ಗಂಟೆವರೆಗೆ ಹೊರ ರೋಗಿ ವಿಭಾಗ ಲಬ್ಯವಿರುವುದಿಲ್ಲ ಮತ್ತು ತುರ್ತು ಸೇವೆ,ಅಪಘಾತ ವಿಭಾಗ, ನೊಂದಾವಣೆ ವಿಬಾಗಗಳು ಎಂದಿನಂತೆ 24ಗಂಟೆ ಕರ್ತವ್ಯ ನಿರ್ವಹಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಶಾಸಕರು ಎಲ್ಲರ ಅಭಿಪ್ರಾಯ ಕ್ರೂಡಿಕರಿಸಿ ಇನ್ನೂ ಮುಂದೆ 15 ದಿನಗಳ ಮದ್ಯಾಹ್ನ 2 ಗಂಟೆಯ ನಂತರ ಸ್ವಯಂ ಘೋಷಿತ ಲಾಕ್ ಡೌನ್ ಎಂಬ ತಿರ್ಮಾನ ಕೈಗೊಂಡು ಈ ಲಾಕ್ ಡೌನ್ ಯಾವುದೆ ಒತ್ತಾಯ ಪೂರ್ವಕ ಅಲ್ಲ ಬದಲಿಗೆ ಜನ ಜಾಗೃತಿ ಅಭಿಯಾನ ವಾಗಿ ಕೊರೊನ ನಿಯಂತ್ರಣ ಮಾಡುವಲ್ಲಿ ನಿರ್ಣಯ ಮಾಡೋಣ ಎಂಬ ಜನರ ಒಕ್ಕೊರೊಲಿನ ಜನ ದ್ವನಿಯಾಗಿ ಶಾಸಕ ನೆಲೆಯಲ್ಲಿ ಜನಾಭಿಪ್ರಾಯವನ್ನು ಘೋಷಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಮಹೇಶ್ ಜೆ, ಕಾರ್ಯನಿರ್ವಾಹಣಾಧಿಕಾರಿ ಜಯರಾಮ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಜಿ.ಪಂ ಸದಸ್ಯ ಕೊರಗಪ್ಪ, ಆರೋಗ್ಯಾಧಿಕಾರಿ ಡಾ.ಕಲಾಮಧು ಉಪಸ್ಥಿತರಿದ್ದರು.

ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ನಿಂದ ತಲಾ ಇಬ್ಬರು ಪ್ರತಿನಿಧಿಗಳು, ನ.ಪಂ, ತಾ.ಪಂ, ಜಿ.ಪಂ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 83 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 33 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 111 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 73 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 46 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ