ಬೆಳ್ತಂಗಡಿ ತಾಲೂಕಿನ ಕೊಕ್ಕಡ ಉಪ್ಪಾರಪಲ್ಕೆಯಲ್ಲಿ ಭಗವಾಧ್ವಜ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು! ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್‌ನಲ್ಲಿದ್ದ ಭಗವಾಧ್ವಜ ಕಟ್ಟೆಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಕಟ್ಟೆಯನ್ನು ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕೆಳಕ್ಕುರುಳಿಸಿದ್ದಾರೆ.

ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಜಂಕ್ಷನ್‌ ಬಳಿ ಇತ್ತೀಚೆಗೆ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಕಟ್ಟೆ ನಿರ್ಮಿಸಿ ಅದರಲ್ಲಿ ಕೇಸರಿ ಧ್ವಜ ಪ್ರತಿಷ್ಠಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರು ಇದೊಂದು ಉದ್ದೇಶಪೂರ್ವಕ ಕೃತ್ಯವೆಂದು ಆರೋಪಿಸಿದ್ದಾರೆ.

ಇದೇ ದಿನ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಸಂಕ್ರಾಂತಿ ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕದ ವತಿಯಿಂದ ಅಂತರ್ ರಾಜ್ಯ ಮಟ್ಟದ ಬೃಹತ್ ಹೊನಲು ಬೆಳಕಿನ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಈ ಪಂದ್ಯಾಟದ ಸಭಾ ಕಾರ್ಯಕ್ರಮಕ್ಕೆ‌ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರಿಗೆ ಉಪ್ಪಾರ ಪಳಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಕಾರ್ಯಕರ್ತರು ವಿವರಿಸಿದ್ದು, ಶಾಸಕರು ವೇದಿಕೆಯಲ್ಲಿಯೇ ಈ ದುಷ್ಕೃತ್ಯವನ್ನು ಖಂಡಿಸಿದರು.

ಭಗಾವಧ್ವಜವು ಹಿಂದುಗಳ ಶಕ್ತಿ ಮತ್ತು ಪ್ರೇರಣೆಯ ಸಂಕೇತ. ಮಾತ್ರವಲ್ಲದೆ ನಮ್ಮ ಹೃದಯದಲ್ಲಿ ಅದಕ್ಕೆ ಆರಾಧನೆಯ ಸ್ಥಾನವನ್ನು ನೀಡಿದೆ. ಹಾಗಾಗಿ ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ಕಿಡಿಗೇಡಿಗಳಿಗೆ ಈ ಸಂದರ್ಭ ಶಾಸಕ ಹರೀಶ್ ಪೂಂಜಾ ಎಚ್ಚರಿಕೆ ನೀಡಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 155 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ