ಬೆಳ್ತಂಗಡಿ ತಾಲೂಕಿನ ಕೊಕ್ಕಡ ಉಪ್ಪಾರಪಲ್ಕೆಯಲ್ಲಿ ಭಗವಾಧ್ವಜ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು! ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್‌ನಲ್ಲಿದ್ದ ಭಗವಾಧ್ವಜ ಕಟ್ಟೆಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಕಟ್ಟೆಯನ್ನು ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕೆಳಕ್ಕುರುಳಿಸಿದ್ದಾರೆ.

ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಜಂಕ್ಷನ್‌ ಬಳಿ ಇತ್ತೀಚೆಗೆ ಸ್ಥಳೀಯ ಹಿಂದೂ ಯುವಕರು ಸೇರಿಕೊಂಡು ಕಟ್ಟೆ ನಿರ್ಮಿಸಿ ಅದರಲ್ಲಿ ಕೇಸರಿ ಧ್ವಜ ಪ್ರತಿಷ್ಠಾಪಿಸಿದ್ದರು. ಆದರೆ ಶನಿವಾರ ರಾತ್ರಿ ಈ ಭಗವಾಧ್ವಜ ಹಾಗೂ ಅದರ ಕಂಬ ಬುಡ ಸಮೇತ ಮುರಿದು ರಸ್ತೆಗೆ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರು ಇದೊಂದು ಉದ್ದೇಶಪೂರ್ವಕ ಕೃತ್ಯವೆಂದು ಆರೋಪಿಸಿದ್ದಾರೆ.

ಇದೇ ದಿನ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳದ ಸಂಕ್ರಾಂತಿ ಮೈದಾನದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕದ ವತಿಯಿಂದ ಅಂತರ್ ರಾಜ್ಯ ಮಟ್ಟದ ಬೃಹತ್ ಹೊನಲು ಬೆಳಕಿನ ಹಗ್ಗ ಜಗ್ಗಾಟ ನಡೆಯುತ್ತಿತ್ತು. ಈ ಪಂದ್ಯಾಟದ ಸಭಾ ಕಾರ್ಯಕ್ರಮಕ್ಕೆ‌ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರಿಗೆ ಉಪ್ಪಾರ ಪಳಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಕಾರ್ಯಕರ್ತರು ವಿವರಿಸಿದ್ದು, ಶಾಸಕರು ವೇದಿಕೆಯಲ್ಲಿಯೇ ಈ ದುಷ್ಕೃತ್ಯವನ್ನು ಖಂಡಿಸಿದರು.

ಭಗಾವಧ್ವಜವು ಹಿಂದುಗಳ ಶಕ್ತಿ ಮತ್ತು ಪ್ರೇರಣೆಯ ಸಂಕೇತ. ಮಾತ್ರವಲ್ಲದೆ ನಮ್ಮ ಹೃದಯದಲ್ಲಿ ಅದಕ್ಕೆ ಆರಾಧನೆಯ ಸ್ಥಾನವನ್ನು ನೀಡಿದೆ. ಹಾಗಾಗಿ ಮತ್ತದೇ ಹಾಳುಗೆಡಹಿದ ಜಾಗದಲ್ಲಿ ಭಗವಾಧ್ವಜವನ್ನು ಹಾರಾಡುವಂತೆ ಮಾಡುವುದಾಗಿ ಹೇಳಿದರು. ಅಲ್ಲದೆ ಇನ್ನು ಮುಂದೆ ಇಂತಹ ದುಷ್ಕೃತ್ಯ ಮರುಕಳಿಸಿದರೆ ಪರಿಣಾಮ ಬೇರೆ ರೀತಿಯೇ ಆಗಿರುತ್ತದೆ ಎಂದು ಕಿಡಿಗೇಡಿಗಳಿಗೆ ಈ ಸಂದರ್ಭ ಶಾಸಕ ಹರೀಶ್ ಪೂಂಜಾ ಎಚ್ಚರಿಕೆ ನೀಡಿದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ