ಬೆಳ್ತಂಗಡಿ ಶಾಸಕರ ನೇತೃತ್ವದಲ್ಲಿ ನಡೆದ ದೇಶ ಭಕ್ತಿಗೀತೆ ಸ್ಪರ್ಧೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆ!

ಬೆಳ್ತಂಗಡಿ: ಆನ್‌ಲೈನ್‌ನಲ್ಲಿ ಹಮ್ಮಿಕೊಂಡಿದ್ದ ದೇಶ ಭಕ್ತಿ ಗೀತೆಯಲ್ಲಿ ಬೆಳ್ತಂಗಡಿ ತಾಲೂಕಿನ 3500 ಮಂದಿಯಲ್ಲದೆ ಹೊರ ತಾಲೂಕು, ಜಿಲ್ಲೆ, ದೇಶ, ವಿದೇಶಗಳಿಂದ ಸುಮಾರು 5 ಸಾವಿರ ಮಂದಿ ಭಾಗವಹಿಸುವ ಮೂಲಕ ಸ್ವಾತಂತ್ರೋತ್ಸವದ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ನಡೆದ ಸ್ಪರ್ಧೆ ಸದ್ಯ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆಯಾಗಿದೆ.

ಈ ದಾಖಲೆ ನಿರ್ಮಾಣದ ಬಗ್ಗೆ ಸರ್ಟಿಫೀಕೆಟ್ ಹಸ್ತಾಂತರ ಕಾರ್ಯಕ್ರಮವು ಆ.15ರಂದು ಬೆಳ್ತಂಗಡಿ ಎಸ್.ಡಿ.ಎಂ ಸಭಾಂಗಣದಲ್ಲಿ ನಡೆದಿದ್ದು, ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ ಇದರ ಏಷ್ಯಾದ ಮುಖ್ಯಸ್ಥ ಡಾ. ಮನಿಷ್ ವೈಷ್ಣವಿ ಡೆಲ್ಲಿ ಅವರು ಶಾಸಕ ಹರೀಶ್ ಪೂಂಜ ಅವರಿಗೆ ಸರ್ಟೀಫೀಕೆಟ್‌ನ್ನು ಹಸ್ತಾಂತರಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ಶಾಸಕರು, ಇದು ನನ್ನ ಒಬ್ಬನ ಸಾಧನೆಯಲ್ಲ, ಇದು ತಾಲೂಕಿನ ಜನರ ಸಾಧನೆ.ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕು ಅಲ್ಲದೆ, ದೇಶ, ವಿದೇಶಗಳಿಂದ ಸುಮಾರು 5 ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸಿದ್ದರು. ಇದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಆಗಿದೆ ಎಂದರು.

ಡಾ.ಮನೀಷ್ ಅವರು ಮಾತನಾಡಿ ತಾನು ಎರಡನೇ ಬಾರಿಗೆ ಬೆಳ್ತಂಗಡಿ ತಾಲೂಕಿಗೆ ಆಗಮಿಸುತ್ತಿದ್ದೇನೆ. ಶಾಸಕರ ನೇತೃತ್ವದಲ್ಲಿ ನಡೆದ ಆನ್‌ಲೈನ್ ದೇಶ ಭಕ್ತಿ ಗೀತೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಿರ್ಮಿಸಿದೆ. ಈ ಹಿಂದೆ 1 ಸಾವಿರ ಮಂದಿ ಹಾಡಿದ ದೇಶ ಭಕ್ತಿ ಗೀತೆ ವರ್ಲ್ಡ್ ರೆಕಾರ್ಡ್ ಆಗಿತ್ತು. ಈ ಬಾರಿ ಸುಮಾರು 5 ಸಾವಿರ ಮಂದಿ ಹಾಡಿರುವುದು ಈ ದಾಖಲೆಯನ್ನು ನಿರ್ಮಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತು ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಸ್ಮಿತೇಶ್ ಎಸ್. ಬಾರ್ಯ ಕಾರ್ಯಕ್ರಮ ನಿರೂಪಿಸಿ, ಅನಿಷ್ ಅಮೀನ್ ಧನ್ಯವಾದವಿತ್ತರು.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ