ಬೆಳ್ತಂಗಡಿಯ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿಯಲ್ಲಿ ‘ನಿಧಿ ರಹಸ್ಯ’ ವದಂತಿ! ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳ ಭೇಟಿ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿ‌ ಸೃಷ್ಟಿಯಾಗಿದೆ.

ಕಳೆದ ಒಂದು ತಿಂಗಳ ಹಿಂದೆ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ ಸಿಕ್ಕಿದ ಜಾಗವನ್ನು ಸಮತಟ್ಟು ಮಾಡಿದ್ದಾರೆ ಎಂದು ಸ್ಥಳೀಯರು ವಿಡಿಯೋ ಮಾಡಿ ಎಸಿ ಯವರಿಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಇದೀಗ ತಹಶೀಲ್ದಾರ್ ಸಮ್ಮುಖದಲ್ಲಿ ಬುಧವಾರ ನಿಧಿ ಶೋಧಕ್ಕೆ‌ ಸಿದ್ಧತೆಗಳು ನಡೆಯುತ್ತಿದ್ದು ಬೆಳ್ತಂಗಡಿ ಎಸ್.ಐ. ನಂದಕುಮಾರ್, ನಡ ಗ್ರಾ.ಪಂ. ಗ್ರಾಮ ಲೆಕ್ಕಿಗ ಅಧಿಕಾರಿಗಳು ಸ್ಥಳದಲ್ಲಿ ಜಮಾಯಿಸಿದ್ದಾರೆ.

ಸ್ಥಳದಲ್ಲಿ ತಾಳೆಮರವಿದ್ದು, ಅದನ್ನು ತೆರವುಗೊಳಿಸುವಾಗ ಮಣ್ಣು ಕುಸಿತಗೊಂಡಿದ್ದು ಯಾವುದೇ ನಿಧಿ ಇಲ್ಲ ಎಂದು ಜಮೀನಿನ ಯಜಮಾನ ತಿಳಿಸಿದ್ದಾರೆ.

ತಹಶೀಲ್ದಾರ್‌ ಮಹೇಶ್ ಜೆ. ಸಮ್ಮುಖದಲ್ಲಿ‌ ನಿಧಿ ಶೋಧಕ್ಕೆ‌ ಕಾರ್ಯ ನಡೆಯುತ್ತಿದ್ದು ಘಟನಾ ಸ್ಥಳದಲ್ಲಿ ರಹಸ್ಯ ನಿಧಿ ಶೋಧ ನೋಡಲು ಊರಿನ ಜನ ಜಮಾಯಿಸಿದ್ದಾರೆ.

ರಹಸ್ಯ ಕಾರ್ಯಾಚರಣೆ ಮುಗಿದಿದ್ದು ನಿಧಿಯ ಯಾವುದೇ ಕುರುಹು ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸಾಗಿದ್ದಾರೆ ಎಂದು ತಿಳಿದು ಬಂದಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ