ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದ ಪತಿರಾಯ! ಬೆಳ್ತಂಗಡಿಯ ನೆರಿಯದಲ್ಲಿ ನಡೆದ ದುರ್ಘಟನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಕುಟ್ಟಿಚ್ಛಾರು ಎಂಬಲ್ಲಿ ಮಹಿಳೆಯೊರ್ವರ ಕೊಲೆ ನಡೆದಿದ್ದು ಆರೋಪಿಯನ್ನು ಜಾನ್ಸನ್ ಎಂದು ಗುರುತಿಸಲಾಗಿದೆ.

ಆರೋಪಿ ಜಾನ್ಸನ್ನು ತನ್ನ ಪತ್ನಿ ಕೇರಳ ಮೂಲದ ಇರುಟ್ಟಿ ಎಂಬಲ್ಲಿಯ ಸೌಮ್ಯಾ ಜಾನ್ಸನ್ ನನ್ನು ಕೊಲೆ ಮಾಡಿದ್ದಾನೆ ಎಂದು ಆಕೆಯ ಸಹೋದರ ಸನೋಜ್ ಫ್ರಾನ್ಸಿಸ್ ಕುತ್ರೊಟ್ಟು ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

47 ವರ್ಷ ಪ್ರಾಯದ ಜಾನ್ಸನ್ ನು ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದು ಆತನ ಪತ್ನಿ ಸೌಮ್ಯಳಿಗೆ ಮರದ ತುಂಡಿನಿಂದ ಹುಬ್ಬಿನ ಜಾಗದಲ್ಲಿ ಹೊಡೆದಿದ್ದ. ಅಲ್ಲದೆ ತಲೆಯ ಹಿಂದಿನ ಭಾಗಕ್ಕೆ ಬಲವಾದ ಏಟು ಕೊಟ್ಟಿದ್ದ. ಕುಡಿದುಕೊಂಡು ಬಂದು ದಿನ ಮನೆಯಲ್ಲಿ ಜಗಳ ಕಾಯುತ್ತಿದ್ದ. ಅಲ್ಲದೆ ಆತ ಪತ್ನಿಯ ಮೇಲೆ ಸದಾ ಸಂಶಯ ಪಡುತ್ತಿದ್ದ. ನಿನ್ನೆ ರಾತ್ರಿ ಕೂಡ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.

ತಲೆಗೆ ಏಟು ಬಿದ್ದ ಸೌಮ್ಯ ಜಾನ್ಸನ್ ಗಳನ್ನು ಮೊದಲು ಬೆಳ್ತಂಗಡಿ ಯಲ್ಲಿ ಆಸ್ಪತ್ರೆಗೆ ತೋರಿಸಲಾಗಿತ್ತು. ಅಲ್ಲಿಂದ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಲು ಸೂಚಿಸಲಾಯಿತು. ಆದರೆ ಮಾರ್ಗಮಧ್ಯೆ ಹೋಗುವ ಮಾರ್ಗ ಮಧ್ಯದಲ್ಲಿ ಆಕೆ ಮೃತಪಟ್ಟಿದ್ದಾರೆ.

ಈ ಘಟನೆಯು ನಿನ್ನೆ ಮಧ್ಯ ರಾತ್ರಿ ನಡೆದಿದ್ದು ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ ಬಿಜಿ ಹಾಗೂ ಧರ್ಮಸ್ಥಳ ಎಸ್ಸೈ ಪವನ್ ಇವರ ತಂಡ ಘಟನೆ ನಡೆದ ಸ್ಥಳಕ್ಕೆ ಆ ಕೂಡಲೇ ಧಾವಿಸಿದ್ದರು. ಪೋಲಿಸರ ತಂಡವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಮೃತ ಸೌಮ್ಯ10 ವರ್ಷ ಪ್ರಾಯದ ಮಗಳನ್ನು ಅಗಲಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ