ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು: ಹರೀಶ್ ಪೂಂಜಾ

ಬೆಳ್ತಂಗಡಿ, ಆ. 6: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ವಿಚಾರವನ್ನು ರಾಜ್ಯ ಸರ್ಕಾರ ಕೇವಲ ಕೇಂದ್ರ ಸರ್ಕಾರದ ವಿಷಯವೆಂದು ಪರಿಗಣಿಸದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸ್ಥಳೀಯರ ಹಕ್ಕುಗಳ ಪರವಾಗಿ ತಾವು ನಿರಂತರವಾಗಿ ಧ್ವನಿ ಎತ್ತುತ್ತಿದ್ದು, ಮುಂದೆಯೂ ಜನರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹರೀಶ್ ಪೂಂಜ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಪಕ್ಷಾತೀತವಾಗಿ ಜನರ ಪರವಾಗಿ ನಿಂತು, ಕರಡು ಅಧಿಸೂಚನೆಯಲ್ಲಿರುವ ಜನವಿರೋಧಿ ಅಂಶಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದಿದ್ದಾರೆ.

ಕರಡು ಅಧಿಸೂಚನೆ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಜುಲೈ 27ರಿಂದ 60 ದಿನಗಳೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.

ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ:

ಕಾರ್ಯದರ್ಶಿಗಳು,ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,ಇಂದಿರಾ ಪರಿಸರ ಭವನ, ಜೋರ್‌ಬಾಗ್, ನವದೆಹಲಿ – 110003. ಇ-ಮೇಲ್: esz-mef@nic.in

ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಗೆ ತಾವು ಸದಾ ಬದ್ಧರಾಗಿದ್ದು, ರಾಜ್ಯ ಸರ್ಕಾರವೂ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Spread the love
  • Related Posts

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಬೆಳ್ತಂಗಡಿ, ಆ. 6: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿ ವತಿಯಿಂದ ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಭಾರತೀಯ ಜನತಾ ಪಾರ್ಟಿಯ…

    Spread the love

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    You Missed

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 3 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 3 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 4 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 8 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 10 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 7 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ