‘ಕೃಷಿತೋ ನಾಸ್ತಿ ದುರ್ಭಿಕ್ಷಂ’ ಎಂಬಂತೆ ಇಂದು ನೇಜಿ ನಾಟಿ ಮಾಡುವ ಮೂಲಕ ಮಾದರಿಯಾದ ಬೆಳ್ತಂಗಡಿ ತಾಲೂಕಿನ ಪತ್ರಕರ್ತರು

ಬೆಳ್ತಂಗಡಿ: ಸಾಂಪ್ರದಾಯಿಕ ಭತ್ತದ ಕೃಷಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮತ್ತು ಭತ್ತದ ಕೃಷಿಯ ಬಗ್ಗೆ ಪ್ರಾಮುಖ್ಯತೆ ನೀಡುವ ನೆಟ್ಟಿನಲ್ಲಿ ಕನ್ಯಾಡಿ ಶ್ರೀಮಠದ ಸ್ವಾಮೀಜಿ ಅವರ ಮಾರ್ಗದರ್ಶನ ತಾಲೂಕಿನ ಪತ್ರಕರ್ತರ ಸಹಕಾರದಲ್ಲಿ ಇಂದಿನ ಯುವಜನತೆಗೆ ಕೃಷಿಯ ಬಗ್ಗೆ ಒಲವು ಮೂಡಿಸುವ ಹಾಗೂ ಎಲ್ಲರಿಂದ ನಿರ್ಲಕ್ಷಕ್ಕೆ ಒಳಗಾಗಿರುವ ಸಾಂಪ್ರದಾಯಿಕ ಸಾವಯವ ಭತ್ತದ ಕೃಷಿಯು ಎಲ್ಲೆಡೆ ಹಿಂದಿನಂತೆ ವಿಜೃಂಭಿಸಲಿ ಎನ್ನುವ ಸದುದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಕ್ಕಳಿಗೆ ಶಿಕ್ಷಣದ ಜತೆಗೆ ಕೃಷಿ ಸಂಸ್ಕೃತಿಯ ಬಗೆಗೆ ನಿರಂತರ ಕಲಿಸಿಕೊಡಬೇಕು. ಕೃಷಿಯ ಕಡೆಗೆ ಗಮನ ಕೊಟ್ಟರೆ ಇಂದಿಗೂ ದುರ್ಭಿಕ್ಷವಿಲ್ಲ. ಜಾಗೃತಿಯ ವಿನಃ ಪರಿವರ್ತನೆಯಾಗದು. ಪತ್ರಿಕಾ ಮಾಧ್ಯಮದ ಪ್ರೇರಣೆಯಿಂದ ಪರಿವರ್ತನೆ ಸಾಧ್ಯ. ಬದುಕಿನಲ್ಲಿ ಆರೋಗ್ಯ, ನೆಮ್ಮದಿ ಕಾಣಬೇಕಾದರೆ ಪೂರ್ತಿ ಕೃಷಿಯ ಒಳಗೆ ಹೋಗಬೇಕು ಎಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ಅವರು ಕನ್ಯಾಡಿ ಶ್ರೀ ಗುರುದೇವ ಮಠದ ಗದ್ದೆಯಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನಸ್ಸು ವಾಣಿಜ್ಯಕರಣ ಗೊಂಡಿರುವುದೇ ಭತ್ತದ ಬೆಳೆಯ ವಿಮುಖತೆಗೆ ಕಾರಣ. ಕೊರೋನ ಪ್ರಕೃತಿಯ ಜತೆಗೆ ಬದುಕುವ ಪಾಠ ಕಲಿಸಿದೆ, ಆತ್ಮನಿರ್ಭರ ಭಾರತದ ಯುವ ಜನಾಂಗಕ್ಕೆ ಕೃಷಿ ಪ್ರೇರಣೆಯಾಗಲಿ ಎಂದರು.


ಭತ್ತದ ಕೃಷಿ ತಜ್ಞ ಬಿ.ಕೆ.ಪರಮೇಶ್ವರ ರಾವ್ ಮತ್ತು ಕ್ರಷಿ ತಜ್ಞ ಪ್ರಭಾಕರ ಮಯ್ಯ ಭತ್ತದ ಕೃಷಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ದ..ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಮನೋಹರ ಬಳಂಜ ನಿರೂಪಿಸಿ, ಕೋಶಾಧಿಕಾರಿ ಚೈತ್ರೇಶ್ ಇಳಂತಿಲ ವಂದಿಸಿದರು.
ಟ್ರಸ್ಟೀ ತುಕಾರಾಮ ಸ್ವಾಗತಿಸಿದರು, ಮಠದ ಎರಡು ಎಕ್ರೆ ಗದ್ದೆಯಲ್ಲಿ ಪತ್ರಕರ್ತ ಸದಸ್ಯರು ಮತ್ತು ಮಹಿಳೆಯರು ಗದ್ದೆ ನಾಟಿ ಮಾಡಿದರು.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ‌ ಸ್ವಾಮೀಜಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಗದ್ದೆಗೆ ಹಾಲೆರೆದು ನೀಜಿ ನಾಟಿಗೆ ಚಾಲನೆ ನೀಡಿದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ