‘ಕೃಷಿತೋ ನಾಸ್ತಿ ದುರ್ಭಿಕ್ಷಂ’ ಎಂಬಂತೆ ಇಂದು ನೇಜಿ ನಾಟಿ ಮಾಡುವ ಮೂಲಕ ಮಾದರಿಯಾದ ಬೆಳ್ತಂಗಡಿ ತಾಲೂಕಿನ ಪತ್ರಕರ್ತರು

ಬೆಳ್ತಂಗಡಿ: ಸಾಂಪ್ರದಾಯಿಕ ಭತ್ತದ ಕೃಷಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮತ್ತು ಭತ್ತದ ಕೃಷಿಯ ಬಗ್ಗೆ ಪ್ರಾಮುಖ್ಯತೆ ನೀಡುವ ನೆಟ್ಟಿನಲ್ಲಿ ಕನ್ಯಾಡಿ ಶ್ರೀಮಠದ ಸ್ವಾಮೀಜಿ ಅವರ ಮಾರ್ಗದರ್ಶನ ತಾಲೂಕಿನ ಪತ್ರಕರ್ತರ ಸಹಕಾರದಲ್ಲಿ ಇಂದಿನ ಯುವಜನತೆಗೆ ಕೃಷಿಯ ಬಗ್ಗೆ ಒಲವು ಮೂಡಿಸುವ ಹಾಗೂ ಎಲ್ಲರಿಂದ ನಿರ್ಲಕ್ಷಕ್ಕೆ ಒಳಗಾಗಿರುವ ಸಾಂಪ್ರದಾಯಿಕ ಸಾವಯವ ಭತ್ತದ ಕೃಷಿಯು ಎಲ್ಲೆಡೆ ಹಿಂದಿನಂತೆ ವಿಜೃಂಭಿಸಲಿ ಎನ್ನುವ ಸದುದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಕ್ಕಳಿಗೆ ಶಿಕ್ಷಣದ ಜತೆಗೆ ಕೃಷಿ ಸಂಸ್ಕೃತಿಯ ಬಗೆಗೆ ನಿರಂತರ ಕಲಿಸಿಕೊಡಬೇಕು. ಕೃಷಿಯ ಕಡೆಗೆ ಗಮನ ಕೊಟ್ಟರೆ ಇಂದಿಗೂ ದುರ್ಭಿಕ್ಷವಿಲ್ಲ. ಜಾಗೃತಿಯ ವಿನಃ ಪರಿವರ್ತನೆಯಾಗದು. ಪತ್ರಿಕಾ ಮಾಧ್ಯಮದ ಪ್ರೇರಣೆಯಿಂದ ಪರಿವರ್ತನೆ ಸಾಧ್ಯ. ಬದುಕಿನಲ್ಲಿ ಆರೋಗ್ಯ, ನೆಮ್ಮದಿ ಕಾಣಬೇಕಾದರೆ ಪೂರ್ತಿ ಕೃಷಿಯ ಒಳಗೆ ಹೋಗಬೇಕು ಎಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.

ಅವರು ಕನ್ಯಾಡಿ ಶ್ರೀ ಗುರುದೇವ ಮಠದ ಗದ್ದೆಯಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನಸ್ಸು ವಾಣಿಜ್ಯಕರಣ ಗೊಂಡಿರುವುದೇ ಭತ್ತದ ಬೆಳೆಯ ವಿಮುಖತೆಗೆ ಕಾರಣ. ಕೊರೋನ ಪ್ರಕೃತಿಯ ಜತೆಗೆ ಬದುಕುವ ಪಾಠ ಕಲಿಸಿದೆ, ಆತ್ಮನಿರ್ಭರ ಭಾರತದ ಯುವ ಜನಾಂಗಕ್ಕೆ ಕೃಷಿ ಪ್ರೇರಣೆಯಾಗಲಿ ಎಂದರು.


ಭತ್ತದ ಕೃಷಿ ತಜ್ಞ ಬಿ.ಕೆ.ಪರಮೇಶ್ವರ ರಾವ್ ಮತ್ತು ಕ್ರಷಿ ತಜ್ಞ ಪ್ರಭಾಕರ ಮಯ್ಯ ಭತ್ತದ ಕೃಷಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ದ..ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಮನೋಹರ ಬಳಂಜ ನಿರೂಪಿಸಿ, ಕೋಶಾಧಿಕಾರಿ ಚೈತ್ರೇಶ್ ಇಳಂತಿಲ ವಂದಿಸಿದರು.
ಟ್ರಸ್ಟೀ ತುಕಾರಾಮ ಸ್ವಾಗತಿಸಿದರು, ಮಠದ ಎರಡು ಎಕ್ರೆ ಗದ್ದೆಯಲ್ಲಿ ಪತ್ರಕರ್ತ ಸದಸ್ಯರು ಮತ್ತು ಮಹಿಳೆಯರು ಗದ್ದೆ ನಾಟಿ ಮಾಡಿದರು.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ‌ ಸ್ವಾಮೀಜಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಗದ್ದೆಗೆ ಹಾಲೆರೆದು ನೀಜಿ ನಾಟಿಗೆ ಚಾಲನೆ ನೀಡಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 4 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 12 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 7 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ