ಬಡ ಕುಟುಂಬಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಸಂಕಷ್ಟಕ್ಕೆ ನೆರವಾದ ಸಮೂಹ ಸಂಘ ಸಂಸ್ಥೆಗಳು

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸಮುದಾಯ ದಳ ಚಾರ್ಮಾಡಿ-ಕಕ್ಕಿಂಜೆ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ತೋಟತ್ತಾಡಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ತೋಟತ್ತಾಡಿಯ ಬಡ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಹಾಗೂ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಿಸಿ ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.


ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ರೋಟರಿ ಸಂಸ್ಥೆಯನ್ನು ಎಷ್ಟು ಹತ್ತಿರವಾಗಿ ನಾವು ನೋಡುತ್ತೇವೋ ಅಷ್ಟೆ ವಿಸ್ತಾರವಾದ ಸೇವೆಯನ್ನು ಮಾಡುತ್ತಾ ಬರುತ್ತಿರುವುದು ಕಾಣುತ್ತದೆ. ಕಷ್ಟದಲ್ಲಿರುವವರಿಗೆ ಸಮಾಜದ ಬೆಳಕು ಕಾಣುವಂತಹ ಕೆಲಸ ಮಾಡುವುದೇ ಸಮಾಜಕ್ಕೆ ಬೇಕಾದಂತಹ ಸಮಾಜಮುಖಿ ಚಟುವಟಿಕೆ ಕೆಲಸ ಒಂದು ಕಡೆಯಾದರೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಬಗ್ಗೆ ಮಾತನಾಡುವಾಗಲೂ ಹೊರಗೆ ನಿಂತವರಿಗೆ ಈ ಸಂಘಟನೆಗಳ ಒಟ್ಟಿಗೆ ಸಂಪರ್ಕಕ್ಕೆ ಬಂದಾಗ ದೇಶ್ಯಾದಂತ ಈ ರೀತಿಯಲ್ಲಿ ಪ್ರತಿ ಗ್ರಾಮ ಗ್ರಾಮಗಳಲ್ಲಿ ಚಟುವಟಿಕೆಗಳ ಮಾಡುವಂತಹ ಸಂಸ್ಕಾರವನ್ನು ಸಮಾಜಕ್ಕೆ ಏನಾದರೂ ಕೊಡಬೇಕು ಎನ್ನುವಂತಹ ರಾಷ್ಟ್ರ ಪ್ರಜ್ಞೆಯನ್ನು ಬೆಳೆಸುವಂತಹ ಸಂಘಟನೆ ಅದೂ ಕೂಡ. ಇಂತಹ ಸಂಘಟನೆಗಳಿಗೆ ಇನ್ನಷ್ಟು ಕೆಲಸ ಮಾಡುವ ಶಕ್ತಿ ಭಗವಂತ ನೀಡಲಿ. ಅದೇ ರೀತಿ ಈ ಕುಟುಂಬಕ್ಕೆ ಕಷ್ಟದಿಂದ ಹೊರ ಬರುವ ದಾರಿ ತೋರಿಸಲಿ ಎಂದು ಪ್ರಾರ್ಥಿಸುವ ಎಂದರು.


ಅಧ್ಯಕ್ಷತೆಯನ್ನು ತೋಟತ್ತಾಡಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಘಟಕದ ಅಧ್ಯಕ್ಷ ಜಯಾನಂದ ಡಿ. ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಧನಂಜಯ ರಾವ್, ಚಾರ್ಮಾಡಿ-ಕಕ್ಕಿಂಜೆ
ರೋಟರಿ ಸಮುದಾಯ ದಳದ ಅಧ್ಯಕ್ಷ ಓಬಯ್ಯ ಗೌಡ, ಮುಂಡಾಜೆ ರೋಟರಿ ಸಮುದಾಯ ದಳದ ಅಧ್ಯಕ್ಷ ವೆಂಕಟೇಶ ಭಟ್ ಕಜೆ, ವೆಂಕಟ್ರಾಯ ಅಡೂರೂ, ಶ್ರೀಧರ್ ಕೆ.ವಿ., ಯಶವಂತ ಪಟವರ್ಧನ್, ನಿವೃತ್ತ ಮೇಜರ್ ಎಂ.ವಿ. ಭಟ್, ರಾಮಕೃಷ್ಣ ಇರ್ವತ್ರಾಯ, ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ತಾಲೂಕು ಗೋ ರಕ್ಷಕ ಪ್ರಮುಖ್ ದಿನೇಶ್ ಚಾರ್ಮಾಡಿ, ತೋಟತ್ತಾಡಿ ಭಜರಂಗದಳದ ಸಂಚಾಲಕ ಅವಿನಾಶ್ ಹಾಗೂ ತೋಟತ್ತಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಓಬಯ್ಯಗೌಡ ಸ್ವಾಗತಿಸಿ, ದಿವಿನೇಶ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸುಧೀಶ್ ಚಾರ್ಮಾಡಿ ನಿರೂಪಿಸಿದರು

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 107 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 67 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 197 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 199 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 101 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 120 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ