ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ

ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.

2023ರ ವಿಧಾನ ಸಭಾ ಚುನಾವಣೆಯ ಮೇಲೆ ತುಳುವೆರೆ ಪಕ್ಷ ಕಣ್ಣಿಟ್ಟಿದ್ದು ಕರಾವಳಿಯ ಬಹುತೇಕ ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಪ್ರತಿಷ್ಠಿತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ತುಳುವೆರೆ ಪಕ್ಷದ ಸಂಸ್ಥಾಪಕರಾದ ಶೈಲೇಶ್ ಆರ್.ಜೆ ಸ್ಪರ್ಧಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹಾಗೂ ಇನ್ನುಳಿದ ಕ್ಷೇತ್ರಗಳಿಂದ ಕೂಡ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡು ತುಳುನಾಡಿನ ಸಮಗ್ರ ಅಭಿವೃದ್ಧಿಗೆ ಪೂರಕ ಹೋರಾಟಗಳನ್ನು ನಡೆಸಿದ್ದು ಪಕ್ಷದ ಚಿಹ್ನೆ ಹಾಗೂ ಕರಾವಳಿಯ ಇತರೇ ಅಭ್ಯರ್ಥಿಗಳ ಪಟ್ಟಿಯು ಜನವರಿ ಅಂತ್ಯದೊಳಗೆ ತುಳುವೆರೆ ಪಕ್ಷದಿಂದ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ಬೆಳ್ತಂಗಡಿಯ ವಿಧಾನ ಸಭಾ ಕ್ಷೇತ್ರದ ತುಳುವೆರೆ ಪಕ್ಷದ ಆಕಾಂಕ್ಷಿ ಶೈಲೇಶ್ ಆರ್ ಜೆ ಯಾರು?

ಮೂಲತಃ ಶಿರ್ಲಾಲು ಗ್ರಾಮದಲ್ಲಿ ಜನಿಸಿದ ಇವರು ಇಂದಬೆಟ್ಟು ಕುವೆತ್ಯಾರ್ ನಲ್ಲಿ ಬಾಲ್ಯ ಜೀವನ ದೊಂದಿಗೆ ಬೆಳ್ತಂಗಡಿಯಲ್ಲಿ ವೃತ್ತಿ ಜೀವನದ ಜೊತೆ ತುಳುನಾಡಿನ ಉಳಿವಿಗಾಗಿ ಧ್ವನಿ ಎತ್ತುತ್ತಿರುವ ಪ್ರಮುಖರು. ಬುಹುತೇಕರಿಗೆ ಚಿರಪರಿಚಿತರಾದ ಶೈಲೇಶ್ ಆರ್.ಜೆ. ವೃತ್ತಿ ಯಲ್ಲಿ ಎಂಜಿನಿಯರ್ ಆಗಿದ್ದು ಸತತ ಪ್ರಯತ್ನದ ಮೂಲಕ ತುಳುವೆರೆ ಪಕ್ಷವನ್ನು ಹುಟ್ಟುಹಾಕಿದ್ದಾರೆ. ಬಹುಸಂಖ್ಯಾತ ಬಿಲ್ಲವ ಸಮಾಜದ ಪ್ರಾಬಲ್ಯ ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಬಿಲ್ಲವ ಸಮಾಜದ ಪ್ರಬಲ ನಾಯಕರಲ್ಲಿ ಒಬ್ಬರಾದ ಇವರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ರಂಗದಲ್ಲಿಯೂ ತೊಡಗಿಸಿಕೊಂಡು ನಿರಂತರ ಜನ ಸಂಪರ್ಕವನ್ನು ಹೊಂದಿರುವ ತುಳುನಾಡಿನ ಮುಂಚೂಣಿ ತುಳುಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ನೇತ್ರಾವತಿ ನದಿ ತಿರುವು ಎತ್ತಿನಹೊಳೆ ಯೋಜನೆಯನ್ನು ಪ್ರಥಮವಾಗಿ ವಿರೋಧಿಸಿ ತುಲುನಾಡಿಗೆ ಮಾರಕವಾದ ಯೋಜನೆ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುವ ಮೂಲಕ ಕರ್ನಾಟಕ ಸರಕಾರಕ್ಕೆ ಪ್ರತಿರೋಧವನ್ನು ಒಡ್ಡಿರುವ ಪ್ರಬಲ ಹೋರಾಟಗಾರರೆಂದು ಹೆಸರುವಾಸಿಯಾಗಿರುವ ಇವರು 2013ರಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ಕಟ್ಟುವ ಮೂಲಕ ನಿರಂತರವಾಗಿ ತುಳು ಭಾಷೆ ತುಳು ರಾಜ್ಯ ತುಳುನಾಡಿನ ನೀರು ಸಂಸ್ಕೃತಿ ಬಗ್ಗೆ ನಿರಂತರವಾಗಿ ಹೋರಾಟಗಳನ್ನು ಸಂಘಟಿಸುತ್ತ ತುಳು ಆಸ್ಮಿತೆಯನ್ನು ಉಳಿಸುವುದಕ್ಕೆ ತುಳುನಾಡಿನಾದ್ಯಂತ ಹೋರಾಡುತ್ತಿರುವ ಶೈಲೇಶ್ ಆರ್. ಜೆ ಯವರು 2020- 21ರಲ್ಲಿ ತುಳುವೆರೆ ಪಕ್ಷ ಎನ್ನುವ ರಾಜಕೀಯ ಪಕ್ಷವನ್ನು ಕಟ್ಟುವ ಮೂಲಕ ಇವರು ಈ ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಲುವೆರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ