ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ

ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.

2023ರ ವಿಧಾನ ಸಭಾ ಚುನಾವಣೆಯ ಮೇಲೆ ತುಳುವೆರೆ ಪಕ್ಷ ಕಣ್ಣಿಟ್ಟಿದ್ದು ಕರಾವಳಿಯ ಬಹುತೇಕ ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಪ್ರತಿಷ್ಠಿತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ತುಳುವೆರೆ ಪಕ್ಷದ ಸಂಸ್ಥಾಪಕರಾದ ಶೈಲೇಶ್ ಆರ್.ಜೆ ಸ್ಪರ್ಧಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹಾಗೂ ಇನ್ನುಳಿದ ಕ್ಷೇತ್ರಗಳಿಂದ ಕೂಡ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡು ತುಳುನಾಡಿನ ಸಮಗ್ರ ಅಭಿವೃದ್ಧಿಗೆ ಪೂರಕ ಹೋರಾಟಗಳನ್ನು ನಡೆಸಿದ್ದು ಪಕ್ಷದ ಚಿಹ್ನೆ ಹಾಗೂ ಕರಾವಳಿಯ ಇತರೇ ಅಭ್ಯರ್ಥಿಗಳ ಪಟ್ಟಿಯು ಜನವರಿ ಅಂತ್ಯದೊಳಗೆ ತುಳುವೆರೆ ಪಕ್ಷದಿಂದ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ಬೆಳ್ತಂಗಡಿಯ ವಿಧಾನ ಸಭಾ ಕ್ಷೇತ್ರದ ತುಳುವೆರೆ ಪಕ್ಷದ ಆಕಾಂಕ್ಷಿ ಶೈಲೇಶ್ ಆರ್ ಜೆ ಯಾರು?

ಮೂಲತಃ ಶಿರ್ಲಾಲು ಗ್ರಾಮದಲ್ಲಿ ಜನಿಸಿದ ಇವರು ಇಂದಬೆಟ್ಟು ಕುವೆತ್ಯಾರ್ ನಲ್ಲಿ ಬಾಲ್ಯ ಜೀವನ ದೊಂದಿಗೆ ಬೆಳ್ತಂಗಡಿಯಲ್ಲಿ ವೃತ್ತಿ ಜೀವನದ ಜೊತೆ ತುಳುನಾಡಿನ ಉಳಿವಿಗಾಗಿ ಧ್ವನಿ ಎತ್ತುತ್ತಿರುವ ಪ್ರಮುಖರು. ಬುಹುತೇಕರಿಗೆ ಚಿರಪರಿಚಿತರಾದ ಶೈಲೇಶ್ ಆರ್.ಜೆ. ವೃತ್ತಿ ಯಲ್ಲಿ ಎಂಜಿನಿಯರ್ ಆಗಿದ್ದು ಸತತ ಪ್ರಯತ್ನದ ಮೂಲಕ ತುಳುವೆರೆ ಪಕ್ಷವನ್ನು ಹುಟ್ಟುಹಾಕಿದ್ದಾರೆ. ಬಹುಸಂಖ್ಯಾತ ಬಿಲ್ಲವ ಸಮಾಜದ ಪ್ರಾಬಲ್ಯ ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಬಿಲ್ಲವ ಸಮಾಜದ ಪ್ರಬಲ ನಾಯಕರಲ್ಲಿ ಒಬ್ಬರಾದ ಇವರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ರಂಗದಲ್ಲಿಯೂ ತೊಡಗಿಸಿಕೊಂಡು ನಿರಂತರ ಜನ ಸಂಪರ್ಕವನ್ನು ಹೊಂದಿರುವ ತುಳುನಾಡಿನ ಮುಂಚೂಣಿ ತುಳುಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ನೇತ್ರಾವತಿ ನದಿ ತಿರುವು ಎತ್ತಿನಹೊಳೆ ಯೋಜನೆಯನ್ನು ಪ್ರಥಮವಾಗಿ ವಿರೋಧಿಸಿ ತುಲುನಾಡಿಗೆ ಮಾರಕವಾದ ಯೋಜನೆ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುವ ಮೂಲಕ ಕರ್ನಾಟಕ ಸರಕಾರಕ್ಕೆ ಪ್ರತಿರೋಧವನ್ನು ಒಡ್ಡಿರುವ ಪ್ರಬಲ ಹೋರಾಟಗಾರರೆಂದು ಹೆಸರುವಾಸಿಯಾಗಿರುವ ಇವರು 2013ರಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ಕಟ್ಟುವ ಮೂಲಕ ನಿರಂತರವಾಗಿ ತುಳು ಭಾಷೆ ತುಳು ರಾಜ್ಯ ತುಳುನಾಡಿನ ನೀರು ಸಂಸ್ಕೃತಿ ಬಗ್ಗೆ ನಿರಂತರವಾಗಿ ಹೋರಾಟಗಳನ್ನು ಸಂಘಟಿಸುತ್ತ ತುಳು ಆಸ್ಮಿತೆಯನ್ನು ಉಳಿಸುವುದಕ್ಕೆ ತುಳುನಾಡಿನಾದ್ಯಂತ ಹೋರಾಡುತ್ತಿರುವ ಶೈಲೇಶ್ ಆರ್. ಜೆ ಯವರು 2020- 21ರಲ್ಲಿ ತುಳುವೆರೆ ಪಕ್ಷ ಎನ್ನುವ ರಾಜಕೀಯ ಪಕ್ಷವನ್ನು ಕಟ್ಟುವ ಮೂಲಕ ಇವರು ಈ ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಲುವೆರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು