ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ

ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.

2023ರ ವಿಧಾನ ಸಭಾ ಚುನಾವಣೆಯ ಮೇಲೆ ತುಳುವೆರೆ ಪಕ್ಷ ಕಣ್ಣಿಟ್ಟಿದ್ದು ಕರಾವಳಿಯ ಬಹುತೇಕ ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ಪ್ರತಿಷ್ಠಿತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ತುಳುವೆರೆ ಪಕ್ಷದ ಸಂಸ್ಥಾಪಕರಾದ ಶೈಲೇಶ್ ಆರ್.ಜೆ ಸ್ಪರ್ಧಿಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹಾಗೂ ಇನ್ನುಳಿದ ಕ್ಷೇತ್ರಗಳಿಂದ ಕೂಡ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡು ತುಳುನಾಡಿನ ಸಮಗ್ರ ಅಭಿವೃದ್ಧಿಗೆ ಪೂರಕ ಹೋರಾಟಗಳನ್ನು ನಡೆಸಿದ್ದು ಪಕ್ಷದ ಚಿಹ್ನೆ ಹಾಗೂ ಕರಾವಳಿಯ ಇತರೇ ಅಭ್ಯರ್ಥಿಗಳ ಪಟ್ಟಿಯು ಜನವರಿ ಅಂತ್ಯದೊಳಗೆ ತುಳುವೆರೆ ಪಕ್ಷದಿಂದ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ಬೆಳ್ತಂಗಡಿಯ ವಿಧಾನ ಸಭಾ ಕ್ಷೇತ್ರದ ತುಳುವೆರೆ ಪಕ್ಷದ ಆಕಾಂಕ್ಷಿ ಶೈಲೇಶ್ ಆರ್ ಜೆ ಯಾರು?

ಮೂಲತಃ ಶಿರ್ಲಾಲು ಗ್ರಾಮದಲ್ಲಿ ಜನಿಸಿದ ಇವರು ಇಂದಬೆಟ್ಟು ಕುವೆತ್ಯಾರ್ ನಲ್ಲಿ ಬಾಲ್ಯ ಜೀವನ ದೊಂದಿಗೆ ಬೆಳ್ತಂಗಡಿಯಲ್ಲಿ ವೃತ್ತಿ ಜೀವನದ ಜೊತೆ ತುಳುನಾಡಿನ ಉಳಿವಿಗಾಗಿ ಧ್ವನಿ ಎತ್ತುತ್ತಿರುವ ಪ್ರಮುಖರು. ಬುಹುತೇಕರಿಗೆ ಚಿರಪರಿಚಿತರಾದ ಶೈಲೇಶ್ ಆರ್.ಜೆ. ವೃತ್ತಿ ಯಲ್ಲಿ ಎಂಜಿನಿಯರ್ ಆಗಿದ್ದು ಸತತ ಪ್ರಯತ್ನದ ಮೂಲಕ ತುಳುವೆರೆ ಪಕ್ಷವನ್ನು ಹುಟ್ಟುಹಾಕಿದ್ದಾರೆ. ಬಹುಸಂಖ್ಯಾತ ಬಿಲ್ಲವ ಸಮಾಜದ ಪ್ರಾಬಲ್ಯ ಹೊಂದಿರುವ ಬೆಳ್ತಂಗಡಿ ತಾಲೂಕಿನಲ್ಲಿ ಬಿಲ್ಲವ ಸಮಾಜದ ಪ್ರಬಲ ನಾಯಕರಲ್ಲಿ ಒಬ್ಬರಾದ ಇವರು ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ರಂಗದಲ್ಲಿಯೂ ತೊಡಗಿಸಿಕೊಂಡು ನಿರಂತರ ಜನ ಸಂಪರ್ಕವನ್ನು ಹೊಂದಿರುವ ತುಳುನಾಡಿನ ಮುಂಚೂಣಿ ತುಳುಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ.

ನೇತ್ರಾವತಿ ನದಿ ತಿರುವು ಎತ್ತಿನಹೊಳೆ ಯೋಜನೆಯನ್ನು ಪ್ರಥಮವಾಗಿ ವಿರೋಧಿಸಿ ತುಲುನಾಡಿಗೆ ಮಾರಕವಾದ ಯೋಜನೆ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುವ ಮೂಲಕ ಕರ್ನಾಟಕ ಸರಕಾರಕ್ಕೆ ಪ್ರತಿರೋಧವನ್ನು ಒಡ್ಡಿರುವ ಪ್ರಬಲ ಹೋರಾಟಗಾರರೆಂದು ಹೆಸರುವಾಸಿಯಾಗಿರುವ ಇವರು 2013ರಲ್ಲಿ ತುಳುನಾಡು ಒಕ್ಕೂಟ ಸಂಘಟನೆಯ ಕಟ್ಟುವ ಮೂಲಕ ನಿರಂತರವಾಗಿ ತುಳು ಭಾಷೆ ತುಳು ರಾಜ್ಯ ತುಳುನಾಡಿನ ನೀರು ಸಂಸ್ಕೃತಿ ಬಗ್ಗೆ ನಿರಂತರವಾಗಿ ಹೋರಾಟಗಳನ್ನು ಸಂಘಟಿಸುತ್ತ ತುಳು ಆಸ್ಮಿತೆಯನ್ನು ಉಳಿಸುವುದಕ್ಕೆ ತುಳುನಾಡಿನಾದ್ಯಂತ ಹೋರಾಡುತ್ತಿರುವ ಶೈಲೇಶ್ ಆರ್. ಜೆ ಯವರು 2020- 21ರಲ್ಲಿ ತುಳುವೆರೆ ಪಕ್ಷ ಎನ್ನುವ ರಾಜಕೀಯ ಪಕ್ಷವನ್ನು ಕಟ್ಟುವ ಮೂಲಕ ಇವರು ಈ ಬಾರಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಲುವೆರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!