BMS ಬೆಳ್ತಂಗಡಿ ವತಿಯಿಂದ ಮುಂಡಾಜೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘ ತಾಲೂಕು ಸಮಿತಿ ‌ಬೆಳ್ತಂಗಡಿ ಹಾಗೂ ಬಿ.ಎಂಎಸ್ ಗ್ರಾಮ ಸಮಿತಿ ಮುಂಡಾಜೆ ಇದರ ಅಶ್ರಯದಲ್ಲಿ ನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮ ಹಾಗೂ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಶಿಬಿರ ಮುಂಡಾಜೆ ಯುವಕ ಮಂಡಲ ಸಭಾಂಗಣದಲ್ಲಿ ‌ಬಿ.ಎಂ.ಎಸ್ ನ ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಬಿ.ಎಂ.ಎಸ್ ತಾಲೂಕು ಸಮಿತಿ ಅಧ್ಯಕ್ಷರಾದ ಉದಯ ಬಿ.ಕೆ ಅವರು ಮಾತನಾಡುತ್ತಾ ಭಾರತೀಯ ಮಜ್ದೂರ್ ಸಂಘ ಕಾರ್ಮಿಕರ ಹಿತಕ್ಕಾಗಿ ಕೆಲಸ ಮಾಡುತ್ತಿದ್ದು ಕಾರ್ಮಿಕರಿಗೆ ಸೌಲಭ್ಯಗಳನ್ನು ಸುಲಭವಾಗಿ ತೆಗೆಸಿಕೊಡಲು ನೆರವಾಗು ನಿಟ್ಟಿನಲ್ಲಿ ಕಾರ್ಮಿಕರಿಗೆ ಸಹಕರಿಸುತ್ತಿದ್ದು ಹಾಗೂ ದೇಶಭಿಮಾನದೊಂದಿಗೆ ರಾಷ್ಟ್ರ ಕಾರ್ಯದಲ್ಲಿ ಕಾರ್ಮಿರನ್ನು‌ ಜೋಡಿಸುತ್ತಿದೆ, ಬಿ.ಎಂ.ಎಸ್ ನ ಸ್ಥಾಪಕರಾದ ದತ್ತೋ ಪಂತ ಥೇಂಗಡಿಜೀ ಅವರ ಕನಸನ್ನು ಸಾಕಾರ ಮಾಡಲು ಕಾರ್ಮಿಕರು ಬಿ ಎಂ ಸ್ ನೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು. ಬಿ.ಎಂ.ಎಸ್ ನ ತಾಲೂಕು ಸಮಿತಿ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಅವರು ಕಾರ್ಮಿಕರಿಗಿರುವ ಸೌಲಭ್ಯಗಳು ಹಾಗೂ ಜೀವನ‌ ಬೀಮಾ ಹಾಗೂ ಸುರಕ್ಷಾ ಇನ್ಸೂರೆನ್ಸ್ ಯೋಜನೆಗಳು‌ ಹಾಗೂ ಪ್ರಧಾನ ‌ಮಂತ್ರಿ ಶ್ರಮ ಯೋಗಿಕ್ ಪಿಂಚಣಿ ಯೋಜನೆಗಳ ಮಾಹಿತಿ ನೀಡಿದರು.

ಕಾರ್ಯಕ್ರಮ ದಲ್ಲಿ ಸುಮಾರು 60 ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸ್ಥಳೀಯ ‌ಪ್ರಮುಖರಾದ ವಿಶ್ವನಾಥ ಶೆಟ್ಟಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲು ಹಾಗೂ ಕಲ್ಮಂಜ ಗ್ರಾಮ ಸಮಿತಿ ಅಧ್ಯಕ್ಷರಾದ ಕುಮಾರ್ ನಾಥ್ ಶೆಟ್ಟಿ ಉಪಸ್ಥಿತರಿದ್ದರು. ಬಿ.ಎಂ.ಎಸ್ ಮುಂಡಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ವಿಜಯ ಕುಮಾರ್ ಕಾರ್ಯಕ್ರಮ ‌ನಿರ್ವಹಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 9 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ