ಭಾರತೀಯ ಮಜ್ದೂರು ಸಂಘವು ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ, ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಸ್ಥಳಾಂತರಗೊಂಡಿರುವ ನೂತನ ಕಛೇರಿಯ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಕಾರ್ಯಕ್ರಮವು ಭಾರತೀಯ ಮಜ್ದೂರು ಸಂಘದ ನೂತನ ಕಛೇರಿಯ ವಠಾರದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರಾದ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ ಭಾರತದಲ್ಲಿ ಮೊದಲನೇ ಸ್ಥಾನವನ್ನ ಭಾರತೀಯ ಮಜ್ದೂರು ಸಂಘ ಪಡೆದಿದೆ. ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ, ಹಿಂದುತ್ವದಿಂದ ಜಗತ್ತು ಬೆಳೆಯುವುದು, ಜಗತ್ತಿಗೆ ಹಿತವನ್ನು ಮಾಡುವ ದೃಷ್ಠಿಕೋನ ಕಾರ್ಮಿಕರದ್ದು. ಒಬ್ಬ ಕಾರ್ಮಿಕ ಪ್ರಾಮಾಣಿಕವಾಗಿ ದುಡಿಯುತ್ತಾನೆ ಆತನಿಗೆ ಸಹಕಾರ ಸಿಕ್ಕಿದರೆ ಆತ ತನ್ನ ಊರು ಗ್ರಾಮವನ್ನೇ ಎತ್ತಿ ಹಿಡಿಯುತ್ತಾನೆ. ಶ್ರಮಿಕನಿಲ್ಲದ ಬದುಕಿಲ್ಲ, ಹಂಚಿಕೊಂಡು ಬದುಕೋಣ ಅನ್ನುವ ಚಿಂತಣೆ ಅದು ಭಾರತೀಯ ಚಿಂತನೆ ಎಂದು ತಿಳಿಸಿದರು.


ಇದೇ ವೇಳೆ ಮಾತನಾಡಿದ ಪ್ರತಾಪ್ ಸಿಂಹ ನಾಯಕ್ ಕಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಮಜ್ದೂರು ಸಂಘ ಈ ದೇಶದಲ್ಲೇ ಮೊದಲ ಸ್ಥಾನವನ್ನು ಪಡೆದಿದೆ. ಸಮಾಜದ ರಾಷ್ಟ್ರದ ಅಭಿವೃದ್ದಿಗೆ ಸಾಮರಸ್ಯ ಅತೀ ಮುಖ್ಯ. ಎಂದು ಮುಂದೆ ಬಂದ ಸಂಘ ಭಾರತೀಯ ಮಜ್ದೂರು ಸಂಘ. ಎಂದು ಸಂತೋಷ ವ್ಯಕ್ತಪಡಿಸಿದರು.


ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ತಾಲೂಕಿನ ಬೂತ್ ಮಟ್ಟಕ್ಕೆ ಭಾರತೀಯ ಮಜ್ದೂರ್ ಸಂಘವನ್ನು ತಂದಿದ್ದಾರೆ ಎಂದರೆ ಅದು ಸಂತಸದ ವಿಷಯವಾಗಿದೆ. ಪ್ರಾಮಾಣಿಕ ವಾದ ಪ್ರಯತ್ನವನ್ನು ಶ್ರಮಿಕರಿಗಾಗಿ ಮಾಡುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ ತನ್ನ ವೃತ್ತಿಯಲ್ಲಿ ಸಿಗುವಂತಹ ಹಣವನ್ನು ಶ್ರಮಿಕರಿಗಾಗಿ ನೀಡಿ ಪ್ರಾಮಾಣಿಕವಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ. ಸ್ವಾರ್ಥ ಇಲ್ಲದೆ ನಿಸ್ವಾರ್ಥದಿಂದ ಕಾರ್ಯ ಮಾಡಿದ ಸಲುವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಭಾರತೀಯ ಮಜ್ದೂರು ಸಂಘ ಕಟ್ಟಡ ಸ್ಥಾಪನೆಯಾಗಲು ಕಾರಣವಾಯಿತು. ಪ್ರಾಮಾಣಿಕ ಪ್ರಯತ್ನ ಬೆಳ್ತಂಗಡಿ ಬಿಎಂಎಸ್ ಸಂಘದಿಂದ ಆಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.


ಭಾರತೀಯ ಮಜ್ದೂರು ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷರು ವಿಶ್ವನಾಥ ಶೆಟ್ಟಿ ಮಾತನಾಡಿ
ವಿಶ್ವದಲ್ಲೇ ಮೊದಲ ಸ್ಥಾನವನ್ನ ಪಡೆದಿದೆ ಭಾರತೀಯ ಮಜ್ದೂರು ಸಂಘ. ಇದಕ್ಕೆ ಕಾರಣ ಕಾರ್ಮಿಕ ವರ್ಗಕ್ಕೆ ಸಲ್ಲಬೇಕು.ಭಾರತೀಯ ಮಜ್ದೂರು ಸಂಘದ ಬೆಳವಣಿಗೆ ಬೆಳೆಯುತ್ತಾ ಹೋಗುತ್ತಿರುವುದು ಸಂತಸದ ವಿಚಾರವಾಗಿದೆ. ಎಂದು ಅಭಿಪ್ರಾಯ ಪಟ್ಟರು.


ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ಶ್ರೀ ಉದಯ ಬಿ.ಕೆ, ಶಾಸಕರು ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಶ್ರೀ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರು ರಜನಿ ಕುಡ್ವ, ಉಪಾಧ್ಯಕ್ಷರಾದ ಜಯಾನಂದ ಗೌಡ,ಭಾರತೀಯ ಮಜ್ದೂರು ಸಂಘ ರಾಜ್ಯ ಉಪಾಧ್ಯಕ್ಷರು ಶ್ರೀ ಭಗವಾನ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 50 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 89 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 606 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ