ಭಾರತೀಯ ಮಜ್ದೂರು ಸಂಘವು ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ, ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಸ್ಥಳಾಂತರಗೊಂಡಿರುವ ನೂತನ ಕಛೇರಿಯ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಕಾರ್ಯಕ್ರಮವು ಭಾರತೀಯ ಮಜ್ದೂರು ಸಂಘದ ನೂತನ ಕಛೇರಿಯ ವಠಾರದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರಾದ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ ಭಾರತದಲ್ಲಿ ಮೊದಲನೇ ಸ್ಥಾನವನ್ನ ಭಾರತೀಯ ಮಜ್ದೂರು ಸಂಘ ಪಡೆದಿದೆ. ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ, ಹಿಂದುತ್ವದಿಂದ ಜಗತ್ತು ಬೆಳೆಯುವುದು, ಜಗತ್ತಿಗೆ ಹಿತವನ್ನು ಮಾಡುವ ದೃಷ್ಠಿಕೋನ ಕಾರ್ಮಿಕರದ್ದು. ಒಬ್ಬ ಕಾರ್ಮಿಕ ಪ್ರಾಮಾಣಿಕವಾಗಿ ದುಡಿಯುತ್ತಾನೆ ಆತನಿಗೆ ಸಹಕಾರ ಸಿಕ್ಕಿದರೆ ಆತ ತನ್ನ ಊರು ಗ್ರಾಮವನ್ನೇ ಎತ್ತಿ ಹಿಡಿಯುತ್ತಾನೆ. ಶ್ರಮಿಕನಿಲ್ಲದ ಬದುಕಿಲ್ಲ, ಹಂಚಿಕೊಂಡು ಬದುಕೋಣ ಅನ್ನುವ ಚಿಂತಣೆ ಅದು ಭಾರತೀಯ ಚಿಂತನೆ ಎಂದು ತಿಳಿಸಿದರು.


ಇದೇ ವೇಳೆ ಮಾತನಾಡಿದ ಪ್ರತಾಪ್ ಸಿಂಹ ನಾಯಕ್ ಕಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಮಜ್ದೂರು ಸಂಘ ಈ ದೇಶದಲ್ಲೇ ಮೊದಲ ಸ್ಥಾನವನ್ನು ಪಡೆದಿದೆ. ಸಮಾಜದ ರಾಷ್ಟ್ರದ ಅಭಿವೃದ್ದಿಗೆ ಸಾಮರಸ್ಯ ಅತೀ ಮುಖ್ಯ. ಎಂದು ಮುಂದೆ ಬಂದ ಸಂಘ ಭಾರತೀಯ ಮಜ್ದೂರು ಸಂಘ. ಎಂದು ಸಂತೋಷ ವ್ಯಕ್ತಪಡಿಸಿದರು.


ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ತಾಲೂಕಿನ ಬೂತ್ ಮಟ್ಟಕ್ಕೆ ಭಾರತೀಯ ಮಜ್ದೂರ್ ಸಂಘವನ್ನು ತಂದಿದ್ದಾರೆ ಎಂದರೆ ಅದು ಸಂತಸದ ವಿಷಯವಾಗಿದೆ. ಪ್ರಾಮಾಣಿಕ ವಾದ ಪ್ರಯತ್ನವನ್ನು ಶ್ರಮಿಕರಿಗಾಗಿ ಮಾಡುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ ತನ್ನ ವೃತ್ತಿಯಲ್ಲಿ ಸಿಗುವಂತಹ ಹಣವನ್ನು ಶ್ರಮಿಕರಿಗಾಗಿ ನೀಡಿ ಪ್ರಾಮಾಣಿಕವಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ. ಸ್ವಾರ್ಥ ಇಲ್ಲದೆ ನಿಸ್ವಾರ್ಥದಿಂದ ಕಾರ್ಯ ಮಾಡಿದ ಸಲುವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಭಾರತೀಯ ಮಜ್ದೂರು ಸಂಘ ಕಟ್ಟಡ ಸ್ಥಾಪನೆಯಾಗಲು ಕಾರಣವಾಯಿತು. ಪ್ರಾಮಾಣಿಕ ಪ್ರಯತ್ನ ಬೆಳ್ತಂಗಡಿ ಬಿಎಂಎಸ್ ಸಂಘದಿಂದ ಆಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.


ಭಾರತೀಯ ಮಜ್ದೂರು ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷರು ವಿಶ್ವನಾಥ ಶೆಟ್ಟಿ ಮಾತನಾಡಿ
ವಿಶ್ವದಲ್ಲೇ ಮೊದಲ ಸ್ಥಾನವನ್ನ ಪಡೆದಿದೆ ಭಾರತೀಯ ಮಜ್ದೂರು ಸಂಘ. ಇದಕ್ಕೆ ಕಾರಣ ಕಾರ್ಮಿಕ ವರ್ಗಕ್ಕೆ ಸಲ್ಲಬೇಕು.ಭಾರತೀಯ ಮಜ್ದೂರು ಸಂಘದ ಬೆಳವಣಿಗೆ ಬೆಳೆಯುತ್ತಾ ಹೋಗುತ್ತಿರುವುದು ಸಂತಸದ ವಿಚಾರವಾಗಿದೆ. ಎಂದು ಅಭಿಪ್ರಾಯ ಪಟ್ಟರು.


ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ಶ್ರೀ ಉದಯ ಬಿ.ಕೆ, ಶಾಸಕರು ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಶ್ರೀ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರು ರಜನಿ ಕುಡ್ವ, ಉಪಾಧ್ಯಕ್ಷರಾದ ಜಯಾನಂದ ಗೌಡ,ಭಾರತೀಯ ಮಜ್ದೂರು ಸಂಘ ರಾಜ್ಯ ಉಪಾಧ್ಯಕ್ಷರು ಶ್ರೀ ಭಗವಾನ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 69 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2246 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ