ಭಾರತೀಯ ಮಜ್ದೂರು ಸಂಘವು ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ: ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬೆಳ್ತಂಗಡಿ: ಭಾರತೀಯ ಮಜ್ದೂರು ಸಂಘ, ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಸ್ಥಳಾಂತರಗೊಂಡಿರುವ ನೂತನ ಕಛೇರಿಯ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಕಾರ್ಯಕ್ರಮವು ಭಾರತೀಯ ಮಜ್ದೂರು ಸಂಘದ ನೂತನ ಕಛೇರಿಯ ವಠಾರದಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರಾದ ಡಾ ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ ಭಾರತದಲ್ಲಿ ಮೊದಲನೇ ಸ್ಥಾನವನ್ನ ಭಾರತೀಯ ಮಜ್ದೂರು ಸಂಘ ಪಡೆದಿದೆ. ಶ್ರಮಿಕರ, ಕಾರ್ಮಿಕರ ಕ್ಷೇಮಕ್ಕಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ, ಹಿಂದುತ್ವದಿಂದ ಜಗತ್ತು ಬೆಳೆಯುವುದು, ಜಗತ್ತಿಗೆ ಹಿತವನ್ನು ಮಾಡುವ ದೃಷ್ಠಿಕೋನ ಕಾರ್ಮಿಕರದ್ದು. ಒಬ್ಬ ಕಾರ್ಮಿಕ ಪ್ರಾಮಾಣಿಕವಾಗಿ ದುಡಿಯುತ್ತಾನೆ ಆತನಿಗೆ ಸಹಕಾರ ಸಿಕ್ಕಿದರೆ ಆತ ತನ್ನ ಊರು ಗ್ರಾಮವನ್ನೇ ಎತ್ತಿ ಹಿಡಿಯುತ್ತಾನೆ. ಶ್ರಮಿಕನಿಲ್ಲದ ಬದುಕಿಲ್ಲ, ಹಂಚಿಕೊಂಡು ಬದುಕೋಣ ಅನ್ನುವ ಚಿಂತಣೆ ಅದು ಭಾರತೀಯ ಚಿಂತನೆ ಎಂದು ತಿಳಿಸಿದರು.


ಇದೇ ವೇಳೆ ಮಾತನಾಡಿದ ಪ್ರತಾಪ್ ಸಿಂಹ ನಾಯಕ್ ಕಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಮಜ್ದೂರು ಸಂಘ ಈ ದೇಶದಲ್ಲೇ ಮೊದಲ ಸ್ಥಾನವನ್ನು ಪಡೆದಿದೆ. ಸಮಾಜದ ರಾಷ್ಟ್ರದ ಅಭಿವೃದ್ದಿಗೆ ಸಾಮರಸ್ಯ ಅತೀ ಮುಖ್ಯ. ಎಂದು ಮುಂದೆ ಬಂದ ಸಂಘ ಭಾರತೀಯ ಮಜ್ದೂರು ಸಂಘ. ಎಂದು ಸಂತೋಷ ವ್ಯಕ್ತಪಡಿಸಿದರು.


ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ತಾಲೂಕಿನ ಬೂತ್ ಮಟ್ಟಕ್ಕೆ ಭಾರತೀಯ ಮಜ್ದೂರ್ ಸಂಘವನ್ನು ತಂದಿದ್ದಾರೆ ಎಂದರೆ ಅದು ಸಂತಸದ ವಿಷಯವಾಗಿದೆ. ಪ್ರಾಮಾಣಿಕ ವಾದ ಪ್ರಯತ್ನವನ್ನು ಶ್ರಮಿಕರಿಗಾಗಿ ಮಾಡುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ ತನ್ನ ವೃತ್ತಿಯಲ್ಲಿ ಸಿಗುವಂತಹ ಹಣವನ್ನು ಶ್ರಮಿಕರಿಗಾಗಿ ನೀಡಿ ಪ್ರಾಮಾಣಿಕವಾಗಿ ದುಡಿಯುವ ಸಂಘ ಅಂದರೆ ಭಾರತೀಯ ಮಜ್ದೂರು ಸಂಘ. ಸ್ವಾರ್ಥ ಇಲ್ಲದೆ ನಿಸ್ವಾರ್ಥದಿಂದ ಕಾರ್ಯ ಮಾಡಿದ ಸಲುವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಭಾರತೀಯ ಮಜ್ದೂರು ಸಂಘ ಕಟ್ಟಡ ಸ್ಥಾಪನೆಯಾಗಲು ಕಾರಣವಾಯಿತು. ಪ್ರಾಮಾಣಿಕ ಪ್ರಯತ್ನ ಬೆಳ್ತಂಗಡಿ ಬಿಎಂಎಸ್ ಸಂಘದಿಂದ ಆಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.


ಭಾರತೀಯ ಮಜ್ದೂರು ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷರು ವಿಶ್ವನಾಥ ಶೆಟ್ಟಿ ಮಾತನಾಡಿ
ವಿಶ್ವದಲ್ಲೇ ಮೊದಲ ಸ್ಥಾನವನ್ನ ಪಡೆದಿದೆ ಭಾರತೀಯ ಮಜ್ದೂರು ಸಂಘ. ಇದಕ್ಕೆ ಕಾರಣ ಕಾರ್ಮಿಕ ವರ್ಗಕ್ಕೆ ಸಲ್ಲಬೇಕು.ಭಾರತೀಯ ಮಜ್ದೂರು ಸಂಘದ ಬೆಳವಣಿಗೆ ಬೆಳೆಯುತ್ತಾ ಹೋಗುತ್ತಿರುವುದು ಸಂತಸದ ವಿಚಾರವಾಗಿದೆ. ಎಂದು ಅಭಿಪ್ರಾಯ ಪಟ್ಟರು.


ಈ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಾಂತ ಕಾರ್ಯಕಾರಣಿ ಆಮಂತ್ರಿತ ಸದಸ್ಯರು ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ಶ್ರೀ ಉದಯ ಬಿ.ಕೆ, ಶಾಸಕರು ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಶ್ರೀ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರು ರಜನಿ ಕುಡ್ವ, ಉಪಾಧ್ಯಕ್ಷರಾದ ಜಯಾನಂದ ಗೌಡ,ಭಾರತೀಯ ಮಜ್ದೂರು ಸಂಘ ರಾಜ್ಯ ಉಪಾಧ್ಯಕ್ಷರು ಶ್ರೀ ಭಗವಾನ್ ದಾಸ್ ಮೊದಲಾದವರು ಉಪಸ್ಥಿತರಿದ್ದರು.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು