BMS ವತಿಯಿಂದ ಕೊಕ್ಕಡದಲ್ಲಿ ಕಟ್ಟಡ ಕಾರ್ಮಿಕರಿಗೆ ಮಾಹಿತಿ ಕಾರ್ಯಗಾರ & ಗುರುತು ಚೀಟಿ ವಿತರಣೆ ಕಾರ್ಯಕ್ರಮ

ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಹಾಗೂ ಬಿ.ಎಂ.ಎಸ್ ಗ್ರಾಮ ಸಮಿತಿ ಕೊಕ್ಕಡ ಇದರ ಅಶ್ರಯದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರಿಗೆ ಗುರುತು ಚೀಟಿ ವಿತರಣೆ ಮತ್ತು ಹಾಗೂ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹರಿ ಹರ ಮಂಟಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಹಿರಿಯರಾದ ಕೃಷ್ಣ ಬಟ್ ಹಿತ್ತಿಲು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಬೆಳ್ತಂಗಡಿ ತಾಲೂಕು ಬಿ.ಎಂ.ಎಸ್ ಅಧ್ಯಕ್ಷರಾದ ಉದಯ ಬಿ. ಕೆ ಯವರು ಮತ್ತು ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ರವರು ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಕೊಕ್ಕಡ ಬಿ ಎಮ್ ಎಸ್ ಸಂಘ ಗ್ರಾಮ ಸಮಿತಿಯ ವತಿಯಲ್ಲಿ ಮೊದಲ ಹಂತದಲ್ಲಿ ನೋಂದಾವಣೆ ಗೊಂಡ ಕಟ್ಟಡ ಕಾರ್ಮಿಕರ 39 ಗುರುತು ಚೀಟಿಯನ್ನು ಸಾಂಕೇತಿಕವಾಗಿ ತಾಲೂಕು ಸಮಿತಿಯ ಪ್ರಮುಖರು ಮತ್ತು ಸಭಾ ಅತಿಥಿಗಳು ವಿತರಣೆ ಮಾಡಿದರು. ನಂತರ ಸಭಾ ಅದ್ಯಕ್ಷರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಕ್ರಷ್ಣ ಭಟ್ ಕೊಕ್ಕಡ ಅವರು ದೇಶ ಹಿತ ಚಿಂತನೆ ಪ್ರತಿ ಸಂಘಟನೆ ಮೊದಲ ದ್ಯೇಯವಾಗಬೇಕಿದೆ. ಇಂದು ನಾವು ಜಗತ್ತು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಕಾರಣ ಮಾನವೀಯತೆಯ ಕೊರತೆ ಕಾರಣವಾಗಿದೆ ವೈಯಕ್ತಿಕ ಹಿತಾಸಕ್ತಿಯೊಂದಿಗೆ ಸಮಾಜದ ಹಿತಾಸಕ್ತಿಯ ಕೆಲಸ ಮಾಡುವುದು ಸಂಘದ ದ್ಯೇಯವಾಗಬೇಕಿದೆ ಕಾರ್ಮಿಕರ ಏಳಿಗೆಗೆ ಶ್ರಮಿಸುತ್ತಿರುವ ಭಾರತೀಯ ಮಜ್ದೂರ್ ಸಂಘ ಭಾರತದ ಘನತೆಯನ್ನು ಎತ್ತಿ ಹಿಡಿಯುವ ಸಂಘನೆಯಾಗಿದೆ ಎಂದರು.

ಕೊಕ್ಕಡ ಸಿ. ಎ ಬ್ಯಾಂಕ್ ಅಧ್ಯಕ್ಷರು ಕುಶಾಲಪ್ಪ ಗೌಡ ಪೂವಾಜೆ ಅವರು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳುವಂತೆ ವಿನಂತಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೊಕ್ಕಡ ಸಿ.ಎ ಬ್ಯಾಂಕ್ ನ ಉಪಾಧ್ಯಕ್ಷರು ಈಶ್ವರ್ ಭಟ್ ಹಿತ್ತಿಲು ಕೊಕ್ಕಡ ಬಿ.ಎಮ್. ಎಸ್. ಗ್ರಾಮ ಸಮಿತಿಯ ಕಾರ್ಯದರ್ಶಿ ವಸಂತ ನಾಯ್ಕ್ ಓಣಿತ್ತರ್ ಜತೆ ಕಾರ್ಯದರ್ಶಿ ಶೇಖರ್ ಗಾಣಗಿರಿ ಉಪಸ್ಥಿತರಿದ್ದರು.ಯೋಗೀಶ್ ಅಲಂಬಿಲ ಸ್ವಾಗತಿಸಿ ಕೇಶವ ಹಲ್ಲಿಂಗೇರಿ ನಿರೂಪಿಸಿ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ