ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳುತ್ತಿದ್ದವರಿಗೆ ಶಾಕ್ ಕೊಟ್ಟ ಪೋಲಿಸ್ ಇಲಾಖೆ! ಇನ್ಮುಂದೆ ಆನ್ ಲೈನ್ ಮೂಲಕವು ದಂಡ ಪಾವತಿಸಬಹುದು

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ ಸಂಚಾರಿ ಪೊಲೀಸ್​ ವಿಭಾಗ ಈಗ ಸ್ಮಾರ್ಟ್​ ಆಗುವತ್ತ ಹೆಜ್ಜೆ ಇಟ್ಟಿದೆ. ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಎಂದು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಇಂದು ಕಮಿಷನರ್​ ಕಮಲ್​ ಪಂತ್ ಅವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದರು. ಇದುವರೆಗು ಡಿಜಿಟಲ್​ ವೇದಿಕೆಯ ಮೂಲಕ ದಂಡ ಪಾವತಿಸಲು ಅವಕಾಶ ಇರಲಿಲ್ಲ. ಈಗ ಪೇಟಿಎಂ ಸೌಲಭ್ಯ ಈ ಕೊರತೆ ನೀಗಿಸಿದೆ. ಈ ಮೊದಲು E-Challan – Digital Traffic/Transport Enforcement Solution ವೆಬ್​ಸೈಟ್​ಗೆ ಭೇಟಿ ನೀಡಿ ನಂತರ ‘ಗೆಟ್​ ಚಲನ್​ ಡೀಟೈಲ್ಸ್’​ ಆಯ್ಕೆಯ ಮೇಲೆ ಕ್ಲಿಕ್​ ಮಾಡಿ ‘ಚಲನ್ ನಂಬರ್​’, ‘ವೆಹಿಕಲ್​ ನಂಬರ್​’, ‘ಡಿಎಲ್​ ನಂಬರ್’ ನಮೂದಿಸಿದ ನಂತರ ಪರಿಶೀಲಿಸಿ ಆನ್​ಲೈನ್​ನಲ್ಲಿ ​ ಪಾವತಿ ಆಯ್ಕೆಯನ್ನು ಕ್ಲಿಕ್​ ಮಾಡಿ ಓಟಿಪಿ ನಮೂದಿಸಿ ಇ-ಚಲನ್​ ಮೂಲಕ ಪಾವತಿ ಮಾಡುವ ಅವಕಾಶವಿತ್ತು.

ಅಲ್ಲದೇ ಡಿಜಿಟಲ್ ರೂಪದಲ್ಲಿ ಪಾವತಿ ಮಾಡಲು ಬೆಂಗಳೂರು ಓನ್
ವೆಬ್ ಸೈಟ್ ,ಪಿಡಿಎ ಮೆಷಿನ್ ಗಳಲ್ಲಿ ಸೌಲಭ್ಯವಿತ್ತು. ಇದು ದಂಡ ಕಟ್ಟದೆ ಅನೇಕರು ಓಡಾಡುವುದಕ್ಕೆ ದಾರಿ ಮಾಡಿಕೊಟ್ಟಿತ್ತಲ್ಲದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ವಸೂಲಾತಿಯೇ ತಲೆ ನೋವಾಗಿ ಸಂಚಾರಿ ಪೊಲೀಸರಿಗೆ ಪರಿಣಮಿಸಿತ್ತು. ಆದರೆ ಈಗ ಈ ಎಲ್ಲಾ ರೀತಿಯ ಗೊಡವೆಗಳಿಗೆ ಪೊಲೀಸ್​ ಇಲಾಖೆ ಗುಡ್​ ಬೈ ಹೇಳಿದೆ.

ಈಗಂತೂ ಹೆಚ್ಚಿನವರ ಬಳಿ ಸ್ಮಾರ್ಟ್​ ಫೋನ್​ ಇದ್ದೆ ಇರುತ್ತದೆ, ಸ್ಮಾರ್ಟ್​ ಫೋನ್​ ಇದ್ದವರ ಬಳಿ ಪೇಟಿಎಂ ಅಥವಾ ಇತರೆ ಡಿಜಿಟಲ್​ ಪೇಮೆಂಟ್ ಆಯಪ್​ಗಳು ಇದ್ದೇಇರುತ್ತವೆ. ಈ ಅಂಶವನ್ನೇ ಗಮನದಲ್ಲಿ ಇಟ್ಟುಕೊಂಡು ಹೊಸಾ ತಂತ್ರಜ್ಣಾನದ ಮೊರೆ ಹೋಗಿದ್ದು, ನೀವೇನಾದರೂ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ನಿಮ್ಮ ಬಳಿ ಪೇಟಿಎಂ ಪೇಮೆಂಟ್​ ಆಯಪ್​ ಇದ್ದರೆ ದಂಡ ಪಾವತಿ ಬಗ್ಗೆ ನೋಟಿಫಿಕೇಶನ್​ ಬರುತ್ತದೆ. ಆ ನೋಟಿಫಿಕೇಶನ್​ ಒತ್ತಿ ದಂಡ ಪಾವತಿಸಬಹುದು. ಟೆಲಿಬ್ರಹ್ಮ ಸಾಫ್ಟ್ ವೇರ್ ಸರ್ವೀಸಸ್ ಸಹಯೋಗದೊಂದಿಗೆ ಸರ್ವೀಸ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ತಂತ್ರಜ್ಞಾನವನ್ನು ಜಾರಿಗೆ ತರಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆಯಾದ ಮೇಲೆ ದಂಡ ಪಾವತಿಯ ವೇಳೆ ಪೊಲೀಸ್​ ಹಾಗೂ ಸಾರ್ವಜನಿಕರ ನಡುವೆ ಸಾಕಷ್ಟು ವಾಗ್ಯುದ್ದಗಳೇ ನಡೆದು ಹೋಗುತ್ತಿದ್ದವು. ಈಗ ನಗದು ರಹಿತವಾಗಿ ದಂಡ ಪಾವತಿಸಲು ಹೊಸ ಮಾರ್ಗ ಇದಾಗಿದ್ದು ಇನ್ನಾದರೂ ದಂಡ ಪಾವತಿ ವೇಳೆ ಅನವಶ್ಯಕ ಸಮಯ ವ್ಯರ್ಥವಾಗುವುದು, ಜಗಳಗಳಾಗುವುದು ಹೀಗೆ ಅನೇಕ ತಲೆ ನೋವುಗಳು ಇಲ್ಲವಾಗಿದ್ದು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆಯೋ ತಿಳಿದಿಲ್ಲ. ಆದರೆ ಪೊಲೀಸರ ಕೆಲಸವಂತೂ ಈಗ ಸುಲಭವಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ: ಡಾ.ಹೇಮಾವತಿ.ವಿ ಹೆಗ್ಗಡೆಯವರು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ವಾತ್ಸಲ್ಯ ಸದಸ್ಯರಾದ ಜಯಶ್ರೀ ಯವರಿಗೆ ವಾತ್ಸಲ್ಯ  ಮನೆಯ ಹಸ್ತಾಂತರ…

    Spread the love

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 21 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    • By admin
    • February 2, 2026
    • 51 views
    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    • By admin
    • February 1, 2026
    • 29 views
    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 79 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 317 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ