ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳುತ್ತಿದ್ದವರಿಗೆ ಶಾಕ್ ಕೊಟ್ಟ ಪೋಲಿಸ್ ಇಲಾಖೆ! ಇನ್ಮುಂದೆ ಆನ್ ಲೈನ್ ಮೂಲಕವು ದಂಡ ಪಾವತಿಸಬಹುದು

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ ಸಂಚಾರಿ ಪೊಲೀಸ್​ ವಿಭಾಗ ಈಗ ಸ್ಮಾರ್ಟ್​ ಆಗುವತ್ತ ಹೆಜ್ಜೆ ಇಟ್ಟಿದೆ. ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಎಂದು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಇಂದು ಕಮಿಷನರ್​ ಕಮಲ್​ ಪಂತ್ ಅವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದರು. ಇದುವರೆಗು ಡಿಜಿಟಲ್​ ವೇದಿಕೆಯ ಮೂಲಕ ದಂಡ ಪಾವತಿಸಲು ಅವಕಾಶ ಇರಲಿಲ್ಲ. ಈಗ ಪೇಟಿಎಂ ಸೌಲಭ್ಯ ಈ ಕೊರತೆ ನೀಗಿಸಿದೆ. ಈ ಮೊದಲು E-Challan – Digital Traffic/Transport Enforcement Solution ವೆಬ್​ಸೈಟ್​ಗೆ ಭೇಟಿ ನೀಡಿ ನಂತರ ‘ಗೆಟ್​ ಚಲನ್​ ಡೀಟೈಲ್ಸ್’​ ಆಯ್ಕೆಯ ಮೇಲೆ ಕ್ಲಿಕ್​ ಮಾಡಿ ‘ಚಲನ್ ನಂಬರ್​’, ‘ವೆಹಿಕಲ್​ ನಂಬರ್​’, ‘ಡಿಎಲ್​ ನಂಬರ್’ ನಮೂದಿಸಿದ ನಂತರ ಪರಿಶೀಲಿಸಿ ಆನ್​ಲೈನ್​ನಲ್ಲಿ ​ ಪಾವತಿ ಆಯ್ಕೆಯನ್ನು ಕ್ಲಿಕ್​ ಮಾಡಿ ಓಟಿಪಿ ನಮೂದಿಸಿ ಇ-ಚಲನ್​ ಮೂಲಕ ಪಾವತಿ ಮಾಡುವ ಅವಕಾಶವಿತ್ತು.

ಅಲ್ಲದೇ ಡಿಜಿಟಲ್ ರೂಪದಲ್ಲಿ ಪಾವತಿ ಮಾಡಲು ಬೆಂಗಳೂರು ಓನ್
ವೆಬ್ ಸೈಟ್ ,ಪಿಡಿಎ ಮೆಷಿನ್ ಗಳಲ್ಲಿ ಸೌಲಭ್ಯವಿತ್ತು. ಇದು ದಂಡ ಕಟ್ಟದೆ ಅನೇಕರು ಓಡಾಡುವುದಕ್ಕೆ ದಾರಿ ಮಾಡಿಕೊಟ್ಟಿತ್ತಲ್ಲದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ವಸೂಲಾತಿಯೇ ತಲೆ ನೋವಾಗಿ ಸಂಚಾರಿ ಪೊಲೀಸರಿಗೆ ಪರಿಣಮಿಸಿತ್ತು. ಆದರೆ ಈಗ ಈ ಎಲ್ಲಾ ರೀತಿಯ ಗೊಡವೆಗಳಿಗೆ ಪೊಲೀಸ್​ ಇಲಾಖೆ ಗುಡ್​ ಬೈ ಹೇಳಿದೆ.

ಈಗಂತೂ ಹೆಚ್ಚಿನವರ ಬಳಿ ಸ್ಮಾರ್ಟ್​ ಫೋನ್​ ಇದ್ದೆ ಇರುತ್ತದೆ, ಸ್ಮಾರ್ಟ್​ ಫೋನ್​ ಇದ್ದವರ ಬಳಿ ಪೇಟಿಎಂ ಅಥವಾ ಇತರೆ ಡಿಜಿಟಲ್​ ಪೇಮೆಂಟ್ ಆಯಪ್​ಗಳು ಇದ್ದೇಇರುತ್ತವೆ. ಈ ಅಂಶವನ್ನೇ ಗಮನದಲ್ಲಿ ಇಟ್ಟುಕೊಂಡು ಹೊಸಾ ತಂತ್ರಜ್ಣಾನದ ಮೊರೆ ಹೋಗಿದ್ದು, ನೀವೇನಾದರೂ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ನಿಮ್ಮ ಬಳಿ ಪೇಟಿಎಂ ಪೇಮೆಂಟ್​ ಆಯಪ್​ ಇದ್ದರೆ ದಂಡ ಪಾವತಿ ಬಗ್ಗೆ ನೋಟಿಫಿಕೇಶನ್​ ಬರುತ್ತದೆ. ಆ ನೋಟಿಫಿಕೇಶನ್​ ಒತ್ತಿ ದಂಡ ಪಾವತಿಸಬಹುದು. ಟೆಲಿಬ್ರಹ್ಮ ಸಾಫ್ಟ್ ವೇರ್ ಸರ್ವೀಸಸ್ ಸಹಯೋಗದೊಂದಿಗೆ ಸರ್ವೀಸ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ತಂತ್ರಜ್ಞಾನವನ್ನು ಜಾರಿಗೆ ತರಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆಯಾದ ಮೇಲೆ ದಂಡ ಪಾವತಿಯ ವೇಳೆ ಪೊಲೀಸ್​ ಹಾಗೂ ಸಾರ್ವಜನಿಕರ ನಡುವೆ ಸಾಕಷ್ಟು ವಾಗ್ಯುದ್ದಗಳೇ ನಡೆದು ಹೋಗುತ್ತಿದ್ದವು. ಈಗ ನಗದು ರಹಿತವಾಗಿ ದಂಡ ಪಾವತಿಸಲು ಹೊಸ ಮಾರ್ಗ ಇದಾಗಿದ್ದು ಇನ್ನಾದರೂ ದಂಡ ಪಾವತಿ ವೇಳೆ ಅನವಶ್ಯಕ ಸಮಯ ವ್ಯರ್ಥವಾಗುವುದು, ಜಗಳಗಳಾಗುವುದು ಹೀಗೆ ಅನೇಕ ತಲೆ ನೋವುಗಳು ಇಲ್ಲವಾಗಿದ್ದು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆಯೋ ತಿಳಿದಿಲ್ಲ. ಆದರೆ ಪೊಲೀಸರ ಕೆಲಸವಂತೂ ಈಗ ಸುಲಭವಾಗಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 18 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 23 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 215 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ