ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳುತ್ತಿದ್ದವರಿಗೆ ಶಾಕ್ ಕೊಟ್ಟ ಪೋಲಿಸ್ ಇಲಾಖೆ! ಇನ್ಮುಂದೆ ಆನ್ ಲೈನ್ ಮೂಲಕವು ದಂಡ ಪಾವತಿಸಬಹುದು

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ ಸಂಚಾರಿ ಪೊಲೀಸ್​ ವಿಭಾಗ ಈಗ ಸ್ಮಾರ್ಟ್​ ಆಗುವತ್ತ ಹೆಜ್ಜೆ ಇಟ್ಟಿದೆ. ಸಂಚಾರ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಎಂದು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಇಂದು ಕಮಿಷನರ್​ ಕಮಲ್​ ಪಂತ್ ಅವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದರು. ಇದುವರೆಗು ಡಿಜಿಟಲ್​ ವೇದಿಕೆಯ ಮೂಲಕ ದಂಡ ಪಾವತಿಸಲು ಅವಕಾಶ ಇರಲಿಲ್ಲ. ಈಗ ಪೇಟಿಎಂ ಸೌಲಭ್ಯ ಈ ಕೊರತೆ ನೀಗಿಸಿದೆ. ಈ ಮೊದಲು E-Challan – Digital Traffic/Transport Enforcement Solution ವೆಬ್​ಸೈಟ್​ಗೆ ಭೇಟಿ ನೀಡಿ ನಂತರ ‘ಗೆಟ್​ ಚಲನ್​ ಡೀಟೈಲ್ಸ್’​ ಆಯ್ಕೆಯ ಮೇಲೆ ಕ್ಲಿಕ್​ ಮಾಡಿ ‘ಚಲನ್ ನಂಬರ್​’, ‘ವೆಹಿಕಲ್​ ನಂಬರ್​’, ‘ಡಿಎಲ್​ ನಂಬರ್’ ನಮೂದಿಸಿದ ನಂತರ ಪರಿಶೀಲಿಸಿ ಆನ್​ಲೈನ್​ನಲ್ಲಿ ​ ಪಾವತಿ ಆಯ್ಕೆಯನ್ನು ಕ್ಲಿಕ್​ ಮಾಡಿ ಓಟಿಪಿ ನಮೂದಿಸಿ ಇ-ಚಲನ್​ ಮೂಲಕ ಪಾವತಿ ಮಾಡುವ ಅವಕಾಶವಿತ್ತು.

ಅಲ್ಲದೇ ಡಿಜಿಟಲ್ ರೂಪದಲ್ಲಿ ಪಾವತಿ ಮಾಡಲು ಬೆಂಗಳೂರು ಓನ್
ವೆಬ್ ಸೈಟ್ ,ಪಿಡಿಎ ಮೆಷಿನ್ ಗಳಲ್ಲಿ ಸೌಲಭ್ಯವಿತ್ತು. ಇದು ದಂಡ ಕಟ್ಟದೆ ಅನೇಕರು ಓಡಾಡುವುದಕ್ಕೆ ದಾರಿ ಮಾಡಿಕೊಟ್ಟಿತ್ತಲ್ಲದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ವಸೂಲಾತಿಯೇ ತಲೆ ನೋವಾಗಿ ಸಂಚಾರಿ ಪೊಲೀಸರಿಗೆ ಪರಿಣಮಿಸಿತ್ತು. ಆದರೆ ಈಗ ಈ ಎಲ್ಲಾ ರೀತಿಯ ಗೊಡವೆಗಳಿಗೆ ಪೊಲೀಸ್​ ಇಲಾಖೆ ಗುಡ್​ ಬೈ ಹೇಳಿದೆ.

ಈಗಂತೂ ಹೆಚ್ಚಿನವರ ಬಳಿ ಸ್ಮಾರ್ಟ್​ ಫೋನ್​ ಇದ್ದೆ ಇರುತ್ತದೆ, ಸ್ಮಾರ್ಟ್​ ಫೋನ್​ ಇದ್ದವರ ಬಳಿ ಪೇಟಿಎಂ ಅಥವಾ ಇತರೆ ಡಿಜಿಟಲ್​ ಪೇಮೆಂಟ್ ಆಯಪ್​ಗಳು ಇದ್ದೇಇರುತ್ತವೆ. ಈ ಅಂಶವನ್ನೇ ಗಮನದಲ್ಲಿ ಇಟ್ಟುಕೊಂಡು ಹೊಸಾ ತಂತ್ರಜ್ಣಾನದ ಮೊರೆ ಹೋಗಿದ್ದು, ನೀವೇನಾದರೂ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ನಿಮ್ಮ ಬಳಿ ಪೇಟಿಎಂ ಪೇಮೆಂಟ್​ ಆಯಪ್​ ಇದ್ದರೆ ದಂಡ ಪಾವತಿ ಬಗ್ಗೆ ನೋಟಿಫಿಕೇಶನ್​ ಬರುತ್ತದೆ. ಆ ನೋಟಿಫಿಕೇಶನ್​ ಒತ್ತಿ ದಂಡ ಪಾವತಿಸಬಹುದು. ಟೆಲಿಬ್ರಹ್ಮ ಸಾಫ್ಟ್ ವೇರ್ ಸರ್ವೀಸಸ್ ಸಹಯೋಗದೊಂದಿಗೆ ಸರ್ವೀಸ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಈ ತಂತ್ರಜ್ಞಾನವನ್ನು ಜಾರಿಗೆ ತರಲಾಗಿದೆ.

ಸಂಚಾರಿ ನಿಯಮ ಉಲ್ಲಂಘನೆಯಾದ ಮೇಲೆ ದಂಡ ಪಾವತಿಯ ವೇಳೆ ಪೊಲೀಸ್​ ಹಾಗೂ ಸಾರ್ವಜನಿಕರ ನಡುವೆ ಸಾಕಷ್ಟು ವಾಗ್ಯುದ್ದಗಳೇ ನಡೆದು ಹೋಗುತ್ತಿದ್ದವು. ಈಗ ನಗದು ರಹಿತವಾಗಿ ದಂಡ ಪಾವತಿಸಲು ಹೊಸ ಮಾರ್ಗ ಇದಾಗಿದ್ದು ಇನ್ನಾದರೂ ದಂಡ ಪಾವತಿ ವೇಳೆ ಅನವಶ್ಯಕ ಸಮಯ ವ್ಯರ್ಥವಾಗುವುದು, ಜಗಳಗಳಾಗುವುದು ಹೀಗೆ ಅನೇಕ ತಲೆ ನೋವುಗಳು ಇಲ್ಲವಾಗಿದ್ದು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದೆಯೋ ತಿಳಿದಿಲ್ಲ. ಆದರೆ ಪೊಲೀಸರ ಕೆಲಸವಂತೂ ಈಗ ಸುಲಭವಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು