ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ