ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…

    Spread the love

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    • By admin
    • June 26, 2026
    • 48 views
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 48 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 37 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 121 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 31 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 63 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ: