ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 4 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 10 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 5 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು