ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ

ಬೆಂಗಳೂರು: ಬಿಪಿಎಲ್​​ ಕಾರ್ಡ್​​ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ‌ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ₹15ರಂತೆ 10 ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ ಸಚಿವ ಉಮೇಶ್ ಕತ್ತಿ ಪ್ರಕಟಣೆ ಹೊರಡಿಸಿದ್ದಾರೆ. 

ಅಷ್ಟೇ ಅಲ್ಲದೇ, ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಕಾರ್ಡ್​​ದಾರರಿಗೆ 35 ಕೆಜಿ ಧಾನ್ಯದ ಜತೆಗೆ  5 ಕೆಜಿ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಎಪಿಎಲ್ ಕಾರ್ಡ್​​ದಾರರಿಗೆ ಕೆಜಿಗೆ 15 ರೂ.‌ನಂತೆ ಅಕ್ಕಿ, ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಧಾನ್ಯದ ಜತೆಗೆ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಂಜಿಕೆವೈ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ತಿಳಿಸಲಾಗಿದೆ.

ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋಧಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಚೀಟಿಗೆ 25 ಕಿಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಆಹಾರ ಸಚಿವ ಉಮೇಶ್ ಕತ್ತಿ ಆದೇಶಿಸಿದ್ದಾರೆ. ಈ ಮೂಲಕ ಕೊವಿಡ್ ಮತ್ತು ಲಾಕ್​ಡೌನ್​ನಿಂದ ತೊಂದರೆಗೆ ಒಳಗಾದವರಿಗೆ ಸದ್ಯ ನೇರವಾಗಿ ವಿಶೇಷ ಪ್ಯಾಕೇಜ್ ಘೋಷಿಸದೆ ಪಡಿತರ ಹೆಚ್ಚಳ ಮಾಡಲಾಗಿದೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ