ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ರಾಜ್ಯ ಸರಕಾರ! ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ ಇಲ್ಲವೇ! ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು!

ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ರಾಜ್ಯ ಸರಕಾರವು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ಎಂಬ ಅನುಮಾನ ಕಾಡುತ್ತಿದೆ. ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ, ಯೋಗ್ಯತೆ ಇಲ್ಲವೇ! ಸಾಲ ಮಾಡಿ ತುಪ್ಪತಿನ್ನು ಎಂಬಂತೆ ಬಡ ಜನರು ದುಡಿಮೆ ಮಾಡಿದ ಅಲ್ಪ ಸ್ವಲ್ಪ ಹಣವನ್ನು ಸಂಗ್ರಹಿಸಿ ಸಂಘ ,ಬ್ಯಾಂಕ್ ಗಳ ಹಾಗೂ ಲೇವಾದೇವಿಯವರಿಂದ ಸಾಲ ಪಡೆದು ತನ್ನ ಮನೆಗೆ ಬೇಕಾದ ಅಗತ್ಯ ವಸ್ತು ಖರೀದಿಸಿದರೇ ಇದನ್ನೇ ಬಂಡವಾಳವನ್ನಾಗಿಸಿ ಬಿಪಿಎಲ್ ಕಾರ್ಡು ರದ್ದು ಮಾಡಲು ಮುಂದಾಗಿದ್ದೀರಿ ಈ ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು ಎಂಬುದನ್ನು ಸಮಸ್ತ ಕನ್ನಡಿಗರಿಗೆ ತಾವು ತಿಳಿಯ ಪಡಿಸಬೇಕಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು.

ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

ಪಡಿತರದಲ್ಲಿ ರಾಗಿ, ಜೋಳ ವಿತರಿಸುವಂತೆ ಕೇಂದ್ರ ಸಚಿವರಿಗೆ ಉಮೇಶ್‌ ಕತ್ತಿ ಮನವಿ ಮಾಡಿದ್ದಾರೆ.

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂಪಾಯಿ ಆದಾಯ, ಐದು ಎಕರೆಗಿಂತ ಹೆಚ್ಚಿನ ಜಮೀನು ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ.

ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ.

ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಏಪ್ರಿಲ್‌ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 613 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ