ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ರಾಜ್ಯ ಸರಕಾರ! ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ ಇಲ್ಲವೇ! ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು!

ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ರಾಜ್ಯ ಸರಕಾರವು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ಎಂಬ ಅನುಮಾನ ಕಾಡುತ್ತಿದೆ. ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ, ಯೋಗ್ಯತೆ ಇಲ್ಲವೇ! ಸಾಲ ಮಾಡಿ ತುಪ್ಪತಿನ್ನು ಎಂಬಂತೆ ಬಡ ಜನರು ದುಡಿಮೆ ಮಾಡಿದ ಅಲ್ಪ ಸ್ವಲ್ಪ ಹಣವನ್ನು ಸಂಗ್ರಹಿಸಿ ಸಂಘ ,ಬ್ಯಾಂಕ್ ಗಳ ಹಾಗೂ ಲೇವಾದೇವಿಯವರಿಂದ ಸಾಲ ಪಡೆದು ತನ್ನ ಮನೆಗೆ ಬೇಕಾದ ಅಗತ್ಯ ವಸ್ತು ಖರೀದಿಸಿದರೇ ಇದನ್ನೇ ಬಂಡವಾಳವನ್ನಾಗಿಸಿ ಬಿಪಿಎಲ್ ಕಾರ್ಡು ರದ್ದು ಮಾಡಲು ಮುಂದಾಗಿದ್ದೀರಿ ಈ ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು ಎಂಬುದನ್ನು ಸಮಸ್ತ ಕನ್ನಡಿಗರಿಗೆ ತಾವು ತಿಳಿಯ ಪಡಿಸಬೇಕಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು.

ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

ಪಡಿತರದಲ್ಲಿ ರಾಗಿ, ಜೋಳ ವಿತರಿಸುವಂತೆ ಕೇಂದ್ರ ಸಚಿವರಿಗೆ ಉಮೇಶ್‌ ಕತ್ತಿ ಮನವಿ ಮಾಡಿದ್ದಾರೆ.

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂಪಾಯಿ ಆದಾಯ, ಐದು ಎಕರೆಗಿಂತ ಹೆಚ್ಚಿನ ಜಮೀನು ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ.

ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ.

ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಏಪ್ರಿಲ್‌ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 32 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 218 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 54 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 113 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ