ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ರಾಜ್ಯ ಸರಕಾರ! ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ ಇಲ್ಲವೇ! ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು!

ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ರಾಜ್ಯ ಸರಕಾರವು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ಎಂಬ ಅನುಮಾನ ಕಾಡುತ್ತಿದೆ. ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ, ಯೋಗ್ಯತೆ ಇಲ್ಲವೇ! ಸಾಲ ಮಾಡಿ ತುಪ್ಪತಿನ್ನು ಎಂಬಂತೆ ಬಡ ಜನರು ದುಡಿಮೆ ಮಾಡಿದ ಅಲ್ಪ ಸ್ವಲ್ಪ ಹಣವನ್ನು ಸಂಗ್ರಹಿಸಿ ಸಂಘ ,ಬ್ಯಾಂಕ್ ಗಳ ಹಾಗೂ ಲೇವಾದೇವಿಯವರಿಂದ ಸಾಲ ಪಡೆದು ತನ್ನ ಮನೆಗೆ ಬೇಕಾದ ಅಗತ್ಯ ವಸ್ತು ಖರೀದಿಸಿದರೇ ಇದನ್ನೇ ಬಂಡವಾಳವನ್ನಾಗಿಸಿ ಬಿಪಿಎಲ್ ಕಾರ್ಡು ರದ್ದು ಮಾಡಲು ಮುಂದಾಗಿದ್ದೀರಿ ಈ ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು ಎಂಬುದನ್ನು ಸಮಸ್ತ ಕನ್ನಡಿಗರಿಗೆ ತಾವು ತಿಳಿಯ ಪಡಿಸಬೇಕಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು.

ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

ಪಡಿತರದಲ್ಲಿ ರಾಗಿ, ಜೋಳ ವಿತರಿಸುವಂತೆ ಕೇಂದ್ರ ಸಚಿವರಿಗೆ ಉಮೇಶ್‌ ಕತ್ತಿ ಮನವಿ ಮಾಡಿದ್ದಾರೆ.

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂಪಾಯಿ ಆದಾಯ, ಐದು ಎಕರೆಗಿಂತ ಹೆಚ್ಚಿನ ಜಮೀನು ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ.

ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ.

ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಏಪ್ರಿಲ್‌ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 61 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 83 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ