ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ರಾಜ್ಯ ಸರಕಾರ! ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ ಇಲ್ಲವೇ! ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು!

ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ರಾಜ್ಯ ಸರಕಾರವು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಹೂಡಲು ಮುಂದಾಯಿತೇ ಎಂಬ ಅನುಮಾನ ಕಾಡುತ್ತಿದೆ. ಆಹಾರ ಸಚಿವರೇ ಬಿಪಿಎಲ್ ಕಾರ್ಡ್ ದಾರರಿಗೆ ಬೈಕ್, ಟಿ.ವಿ, ಪ್ರೀಡ್ಜ್ ಖರೀದಿಸುವಷ್ಟು ಅರ್ಹತೆ, ಯೋಗ್ಯತೆ ಇಲ್ಲವೇ! ಸಾಲ ಮಾಡಿ ತುಪ್ಪತಿನ್ನು ಎಂಬಂತೆ ಬಡ ಜನರು ದುಡಿಮೆ ಮಾಡಿದ ಅಲ್ಪ ಸ್ವಲ್ಪ ಹಣವನ್ನು ಸಂಗ್ರಹಿಸಿ ಸಂಘ ,ಬ್ಯಾಂಕ್ ಗಳ ಹಾಗೂ ಲೇವಾದೇವಿಯವರಿಂದ ಸಾಲ ಪಡೆದು ತನ್ನ ಮನೆಗೆ ಬೇಕಾದ ಅಗತ್ಯ ವಸ್ತು ಖರೀದಿಸಿದರೇ ಇದನ್ನೇ ಬಂಡವಾಳವನ್ನಾಗಿಸಿ ಬಿಪಿಎಲ್ ಕಾರ್ಡು ರದ್ದು ಮಾಡಲು ಮುಂದಾಗಿದ್ದೀರಿ ಈ ಬಿಪಿಎಲ್ ಕಾರ್ಡು ರದ್ದತಿಯ ವರಸೆಯ ಹಿಂದಿರುವ ಜಾಣಕುರುಡುತನ ಎಂತಹದ್ದು ಎಂಬುದನ್ನು ಸಮಸ್ತ ಕನ್ನಡಿಗರಿಗೆ ತಾವು ತಿಳಿಯ ಪಡಿಸಬೇಕಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆಯಲ್ಲಿ ಬೈಕ್‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು.

ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

ಪಡಿತರದಲ್ಲಿ ರಾಗಿ, ಜೋಳ ವಿತರಿಸುವಂತೆ ಕೇಂದ್ರ ಸಚಿವರಿಗೆ ಉಮೇಶ್‌ ಕತ್ತಿ ಮನವಿ ಮಾಡಿದ್ದಾರೆ.

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರೂಪಾಯಿ ಆದಾಯ, ಐದು ಎಕರೆಗಿಂತ ಹೆಚ್ಚಿನ ಜಮೀನು ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ.

ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ.

ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಏಪ್ರಿಲ್‌ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 133 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ