ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ