ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

      ಬರಹ:🖋️ ನರೇಂದ್ರ ರೈ ದೇರ್ಲ     ನಮ್ಮನ್ನು ಸದಾ ಪೊರೆಯುವ ಹಸಿರುಗೋಡೆ ಪಶ್ಚಿಮ ಘಟ್ಟಕ್ಕೆ  ಮುಂದಿನ ಎರಡು ತಿಂಗಳು ಸಂಕಟದ ಕಾಲ. ಜೂನ್ ತಿಂಗಳ ಮೊದಲ ಮಳೆಯವರೆಗೂ ಕಾಡಿನ ಹೃದಯವೇ ಒಣಗಿಬಿಡುವ ಕಡು ಸುಡುಗಾಲವಿದು . ಮರಗಳ ನೆರಳೂ ತಣ್ಣಗೆ ತಂಪು ಕೊಡಲು…

    Spread the love

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ತೀವ್ರ ನಿರಾಶೆ ಮೂಡಿಸಿದೆ. ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

    Spread the love

    You Missed

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 17 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 42 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 64 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 16 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 35 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    • By admin
    • April 6, 2026
    • 23 views
    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!