ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸುಮಾರು ಆರು ತಿಂಗಳಿಂದ ನನ್ನ ಹೆಂಡತಿಗೆ ಮನೋಜ್ ಅಶ್ಲೀಲ ಮೆಸೇಜ್, ವಿಡಿಯೋ ,ಫೊಟೊ ಕಳುಹಿಸಿ ದೈಹಿಕ ಸಂಪರ್ಕಕ್ಕೆ ಬೆಳೆಸೋದಕ್ಕೆ ಒತ್ತಾಯಿಸುತ್ತಿದ್ದ. ಈ ಬಗ್ಗೆ ನನ್ನ ತಮ್ಮನಿಗೆ ಕಿಶೋರ್ ತುಂಬಾ ಬುದ್ದಿ‌ ಮಾತು ಹೇಳಿದ್ದ. ಆದ್ರೂ ಅವನ ವಿಕೃತ ಕಮ್ಮಿಯಾಗಿರಲಿಲ್ಲ. ಇದರಿಂದ ಕೋಪಗೊಂಡ ಕಿಶೋರ್ ತಾನೇ ನನ್ನ ತಮ್ಮನಿಗೆ ಚೂರಿಯಿಂದ ಇರಿದಿದ್ದಾನೆ, ಅಲ್ಲದೇ ಮನೋಜ್ ಅಣ್ಣ ಕಿಶೋರ್ ಬಂಟ್ವಾಳ ಪೋಲಿಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಎಲ್ಲರ ವಾಟ್ಸಾಪ್ ನಲ್ಲಿ ಇಂದು ಹರಿದಾಡುತ್ತಿದೆ.

ಆದರೆ ಇದಕ್ಕೆ ಪೂರಕವೆಂಬಂತೆ ಮತ್ತೊಂದು ಸಂದೇಶವು ಹೆಚ್ಚು ಶೇರ್ ಆಗುತ್ತಿದ್ದು, ವಾಸ್ತವದಲ್ಲಿ ಮನೋಜ್ ಗೆ ಅಣ್ಣತಮ್ಮಂದಿರು ಯಾರೂ ಇಲ್ಲ. ಮನೋಜ್ ಯಾವುದೇ ಸಂಘಟನೆ, ಪಕ್ಷಗಳಲ್ಲಿ ಗುರುತಿಸಿಕೊಂಡವರೂ ಅಲ್ಲ. ತನ್ನ ಪಾಡಿಗೆ ಪರವೂರಿನಲ್ಲಿ ನಿಷ್ಠೆಯಿಂದ ದುಡಿದು ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುತ್ತಿದ್ದರು. ಸರಳ, ಸಜ್ಜನ ವ್ಯಕ್ತಿಯಾಗಿರುವ ಮನೋಜ್ ಬಗ್ಗೆ ಮಿಥ್ಯಾರೋಪಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲಕಿಡಿಗೇಡಿಗಳು ತಮ್ಮ ತೀಟೆ ತೀರಿಸುತ್ತಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ. ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ವಾಸ್ತವಾಂಶವನ್ನು ಜನರಿಗೆ ತಿಳಿಸಿ ಮನೋಜ್ ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ವಿನಂತಿ ಮಾಡಿದ್ದಾರೆ.

Spread the love
  • Related Posts

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಶಿರಾಡಿಯ ಕೆ.ಟಿ. – ಮಳೆಯ ನಡುವೆ ಸವಿದ ಅಪರೂಪದ ರುಚಿ ತುಂತುರು ಮಳೆ ಹನಿಗಳ ನಡುವೆ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಓಡಾಟ ನಡೆಸುವುದು ಮನಸ್ಸಿಗೆ ವಿಶಿಷ್ಟ ಮುದ ನೀಡುತ್ತದೆ. ಅದರಲ್ಲೂ ಸ್ನೇಹಿತರೊಂದಿಗೆ ಹರಟೆಯಾಡುತ್ತಾ ಗುಂಡ್ಯ ದಾಟಿ ಶಿರಾಡಿಯ ಕಡೆಗೆ ಸಾಗುವ ವೇಳೆಗೆ…

    Spread the love

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾ.ಜ.ಪ ಉಪಾಧ್ಯಕ್ಷ, ಕರ್ನಾಟಕ ಸರ್ಕಾರದ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರ ದೇರಳಕಟ್ಟೆಯ ನಿವಾಸಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ…

    Spread the love

    You Missed

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 20 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 23 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 97 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 165 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 68 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 48 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ