ಕಲ್ಪತರು ನಾಡಿನ ತಿಪಟೂರಿನಲ್ಲಿ ವಿವಿಧ ಕಾಮಗಾರಿಗಳ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿಎಸ್ ವೈ

ತಿಪಟೂರು: ಕಲ್ಪತರು ನಾಡಿನ ತಿಪಟೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರು ಇಂದು ಮಿನಿ ವಿಧಾನಸೌಧ, ನೂತನ ನಗರಸಭೆ ಕಟ್ಟಡ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕೊರೋನಾ ಹೆಚ್ಚಾಗುವ ಭೀತಿ ಇದ್ದು ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಆಗುತ್ತಿದ್ದು ಎಲ್ಲರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಯ್ದುಕೊಳ್ಳುವಂತದ್ದು, ಹಾಗೂ ವ್ಯಾಕ್ಸೀನೇಷನ್ ಪಡೆದುಕೊಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಬಜೆಟ್ ಮಂಡನೆ ಮಾಡಿದ್ದು ಮಹಿಳಾಸಬಲೀಕರಣದ ಬಗ್ಗೆ ಹೆಚ್ಚಿನ ಮಹತ್ವವನ್ನು ನೀಡಿದ್ದು ಕಡಿಮೆ ಬಡ್ಡಿದರದಲ್ಲಿ ಹೆಚ್ಚಿನ ಆರ್ಥಿಕ ನೆರವು ಸಿಕ್ಕಿ ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ದೃಷ್ಟಿಯಿಂದ ಈ ಬಜೆಟ್ಟಿನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆಯನ್ನು ನೀಡಿದ್ದು ಇದರ ಸದುಪಯೋಗ ಮಾಡುವಂತೆ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದರು.

ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ರೈತನ ಉತ್ಪನ್ನ ಎರಡು ಪಟ್ಟು ಹೆಚ್ಚಾಗಬೇಕೆಂಬ ಬಗ್ಗೆಯು ಕೆಲಸ ಕಾರ್ಯ ನಡೆಯುತ್ತಿದ್ದು ಕೇಂದ್ರದಿಂದ 6ಸಾವಿರ ನೀಡುತ್ತಿದ್ದು, ರಾಜ್ಯ ಸರಕಾರವು 4ಸಾವಿರ ವನ್ನು ಈ ಕೋವಿಡ್ ಸಂಕಷ್ಟದ ಸಂಧರ್ಭದಲ್ಲಿ ನೀಡುತ್ತಿದ್ದು, ಇದರಂತೆ ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಹಾಗೂ ಇತರೇ ಅನುಕೂಲಗಳು ಸಿಗುವಂತ ಪ್ರಯತ್ನ ಮಾಡುತಿದ್ದು, 2021-2022ನೇ ಆಯವ್ಯಯದಲ್ಲಿ ತುಮಕೂರು ಜಿಲ್ಲೆಗೆ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಅನುದಾನ ಮೀಸಲಿಟ್ಟಿದ್ದು, ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಥಮ ಹಂತದ ಏತ ನೀರಾವರಿ ಯೋಜನೆಯ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಆದಷ್ಟು ಬೇಗ ಎಲ್ಲೆಡೆ ಎತ್ತಿನಹೊಳೆ ನೀರು ಬರುವ ರೀತಿ ಕ್ರಮ ಕೈ ಗೊಳ್ಳುವ ಭರವಸೆ ನೀಡಿದರು.

ತುಮಕೂರು ಜಿಲ್ಲೆಯ ರೈತರಿಗೆ ಅನುಕೂಲವಾಗುವ ಭಧ್ರ ಮೇಲ್ದಂಡೆ ಯೋಜನೆ ಶೀಘ್ರವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವ ಹಾಗೂ ಬೆಂಗಳೂರು ನಗರದಲ್ಲಿ ಶೋಭಾವತಿ ಕಣಿವೆಯಿಂದ ಸಂಸ್ಕರಿಸಿದ ನೀರನ್ನು ತುಮಕೂರು ಸೇರಿದಂತೆ 4 ಜಿಲ್ಲೆಯ 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಮೀಸಲಿರಿಸಲಾಗಿದೆ.

ಶಾಸಕರು ಸಂಸದರು ಇನ್ನೂ ಈ ತಾಲೂಕು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಗಮನಸೆಳೆದಿದ್ದು ಪ್ರಸ್ತುತ ಕೋವಿಡ್ ಸಂಕಷ್ಟದಲ್ಲಿ ಹಣಕಾಸಿನ ಇತಿ ಮಿತಿ ನೋಡಿಕೊಂಡು ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ತಿಳಿಸಿದರು.

ಬಜೆಟ್ ಮುಗಿದ ಕೂಡಲೇ ಪ್ರತಿ ಜಿಲ್ಲೆಗಳಿಗೂ ಬೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತದೆ. ಈಗಾಗಲೇ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಕೊನೆಯ ಶುಕ್ರವಾರ ತಾಲೂಕಿನ ಹಳ್ಳಿಗೆ ಬೇಟಿನೀಡಿ ಅಲ್ಲಿ ರೈತರ ಸಂಕಷ್ಟ ತಿಳಿಯುವಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಮಾಡಿದ್ದು ರೈತನ ಮನೆ ಬಾಗಿಲಿಗೆ ಬಂದು ಅವರ ಸಮಸ್ಯೆಗೆ ಸ್ಪಂದಿಸುವುದು ಸರಕಾರದ ಕರ್ತವ್ಯ ಈ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿಯವರು ತಿಂಗಳಿಗೊಮ್ಮೆ ಜಿಲ್ಲೆಗಳಿಗೆ ಬೇಟಿ ನೀಡುವಂತೆ ಸೂಚಿಸಿದ್ದು ಸಚಿವರು ಕೂಡ ಬೇಟಿ ನೀಡಿ ಸಮಸ್ಯೆ ಪರಿಹರಿಸುವಲ್ಲಿ ಪ್ರಮು ಪಾತ್ರ ವಹಿಸಬೇಕು ಹಾಗೂ ಕೆಲವೆಡೆ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಅಧಿಕಾರಿಗಳು ಯಾವುದೇ ಪೈಲು 15ದಿನ 1 ತಿಂಗಳು ಎಂದು ದಿನ ದೂಡದೇ ಸಕಾಲದಲ್ಲಿ ಸೇವೆ ನೀಡುವ ಅಗತ್ಯತೆಯಿದೆ ಅನಗತ್ಯವಾಗಿ ಅಧಿಕಾರಿಗಳು ರೈತರನ್ನು ಸತಾಯಿಸದೆ ಉತ್ತಮ ಸೇವೆ ನೀಡಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಶಾಸಕ ಬಿ.ಸಿ. ನಾಗೇಶ್, ಸಂಸದ ಜಿ.ಎಸ್.ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️