ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

ಪುತ್ತೂರು, ಜು.15: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರತಿಷ್ಠಿತ ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಜುಲೈ 18ರಂದು ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ “ಆಧುನಿಕ ಮಾಧ್ಯಮ ಕ್ಷೇತ್ರದಲ್ಲಿ ಎ.ಐ. ತಂತ್ರಜ್ಞಾನ” ವಿಷಯದ ಕುರಿತು ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತಿ ಸಿ.ಜಿ. ಉಪನ್ಯಾಸ ನೀಡಲಿದ್ದಾರೆ.

ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಿಕಾ ವಿತರಕ ಇಬ್ರಾಹಿಂ ನೆಕ್ಕಿಲಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ, ತಾಲೂಕು ಪತ್ರಕರ್ತರ ಸಂಘದ ವಿಶೇಷ ಸಾಧಕ ಪತ್ರಕರ್ತರು ಹಾಗೂ ಶೈಕ್ಷಣಿಕ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳನ್ನೂ ಗೌರವಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸಿದ್ದಿಕ್ ನೀರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಪತ್ರಿಕಾ ಕ್ಷೇತ್ರದ ಸುದೀರ್ಘ ಸೇವೆಯನ್ನು ಸ್ಮರಿಸಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಪುತ್ತೂರು ಉಪವಿಭಾಗದ ಸುಳ್ಯ, ಕಡಬ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಅತ್ಯುತ್ತಮ ಪತ್ರಿಕಾ ವರದಿಗೆ ವಾರ್ಷಿಕವಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.

ಪ್ರಥಮ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿರುವ ಅರವಿಂದ ಹೆಬ್ಬಾರ್ ಮುಂಡಾಜೆ ಅವರು ಈ ಹಿಂದೆ ಸುದ್ದಿ ಬಿಡುಗಡೆ ಹಾಗೂ ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದು, ಕಳೆದ ಏಳು ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Spread the love
  • Related Posts

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ…

    Spread the love

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬೆಳ್ತಂಗಡಿ, ಜು. 8: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ…

    Spread the love

    You Missed

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 3 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 10 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ