ಬಸ್ ನಲ್ಲಿ ಹೃದಯಾಘತವಾದರೂ ಮಾನವೀಯತೆ ತೋರದ ಸಿಬ್ಬಂದಿ-ಸಹಪ್ರಯಾಣಿಕರು ಇವರ ನಿರ್ಲಕ್ಷ್ಯಕ್ಕೆ ಬಲಿಯಾಯಿತು ವ್ಯಕ್ತಿಯ ಜೀವ ಸಾರಿಗೆ ಸಚಿವರೇ ಕಲಿಸಿ ತಮ್ಮವರಿಗೆ ಮಾನವೀಯತೆಯ ಪಾಠ

ಬೆಳ್ತಂಗಡಿ: ಬಸ್ಸಿನಲ್ಲೇ ಹೃದಯಾಘಾತ ವಾಗಿದ್ದರೂ ಬಸ್ಸಿನಿಂದ ಇಳಿಸಿ ಮುಂದೆ ಸಾಗಿದ ಬಸ್ ನ ಚಾಲಕ ನಿರ್ವಾಹಕ ಮತ್ತು ಸಹಪ್ರಯಾಣಿಕರ ಅಮಾನವೀಯತೆಗೆ ಒಂದು ಜೀವ ಬಲಿಯಾದ ಘಟನೆ ಉಜಿರೆಯಲ್ಲಿ ನಡೆದಿದೆ.

ಮೂಲತಃ ದಾವಣಗೆರೆಯ ಹರಿಹರ ಮೂಲದ ವ್ಯಕ್ತಿಯೋರ್ವರು ಉಜಿರೆಯಲ್ಲಿ ಬಸ್ಸಿನಲ್ಲಿ ಕೂತ ಸಂದರ್ಭ ಏಕಾಏಕಿ ಕುಸಿದು ಬಿದ್ದಿದ್ದು ಬಸ್ಸಿನಲ್ಲಿ ಇದ್ದವರು ಹಾಗೂ ಸಿಬ್ಬಂದಿ ಇವರನ್ನು ಹಾಗೆಯೇ ಬಸ್ಸಿನಿಂದ ಇಳಿಸಿ ಉಜಿರೆಯ ಬಸ್ಟ್ಯಾಂಡಿನಲ್ಲಿ ಕೂರಿಸಿದ್ದಾರೆ. ದುರಾದೃಷ್ಟವಶಾತ್ ಇವರಿಗೆ ಹೃದಯಾಘತವಾಗಿ ಪ್ರಾಣ ಬಿಟ್ಟಿದ್ದಾರೆ.

ಬಸ್ಸಿನಲ್ಲಿ ಇರುವವರು ಮತ್ತು ಸಿಬ್ಬಂದಿ ಸ್ವಲ್ಪ ಮುಂಜಾಗ್ರತೆ ವಹಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡುತ್ತಿದ್ದರೆ ಈ ವ್ಯಕ್ತಿ ಬದುಕುಳಿಯುತ್ತಿದ್ದರೇನೋ? ಇದ್ಯಾವುದನ್ನೂ ಮಾಡದೆ ಜನ ಮಾನವೀಯತೆ ಮರೆತಿದ್ದಾರೆ ಮಾನವೀಯತೆ ಮರೆತ ಕಾರಣಕ್ಕಾಗಿ ಒಂದು ಜೀವ ಬಲಿಯಾಗಿದೆ.

ಇವರ ಮಗಳು ಉಜಿರೆಯ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಹಾಸ್ಟೆಲ್ಲೊಂದರಲ್ಲಿ ವಾಸ್ತವ್ಯ ಇರುವ ಕಾರಣ, ಮಗಳನ್ನು ನೋಡಿಕೊಂಡು ಬರಲು ಅಪ್ಪ ಹರಿಯಾಣದಿಂದ ಆಗಮಿಸಿದ್ದಾರೆ. ಮಗಳನ್ನು ಭೇಟಿಯಾಗಿ ವಾಪಸ್ಸು ತೆರಳುವ ಸಂದರ್ಭದಲ್ಲಿ ವಿಧಿ ಬೇರೆಯದೇ ಆಟ ತೋರಿದೆ.

ಸಾರಿಗೆ ಸಚಿವರೇ ಸಿಬ್ಬಂದಿಗೆ ಮಾನವೀಯತೆಯ ಮೆರೆಯುವ ಪಾಠ ಮಾಡಬೇಕಾಗಿದೆ. ಈ ಒಂದೇ ವಿಚಾರವಲ್ಲ ಸಾರ್ವಜನಿಕವಾಗಿ ಉತ್ತಮ ಬಾಂಧವ್ಯ ಬೆರೆಸುವ ಪಾಠವನ್ನು ಬೋಧಿಸುವ ಅಗತ್ಯತೆಯಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು