ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 262 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ