ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    • By admin
    • February 1, 2026
    • 9 views
    ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 69 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 310 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 105 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 99 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 90 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???