ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 5 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 8 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 14 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 12 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 13 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ