ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಚಿಕ್ಕಮಗಳೂರು: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.…

    Spread the love

    You Missed

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 15 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 34 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 28 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 30 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 67 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 236 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ