ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 12 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 23 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 12 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 16 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 12 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ