ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ಸಿಂಧನೂರಲ್ಲಿದ್ದಾರೆ 25000 ವಲಸಿಗರು

1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ. ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ.

ಪೌರತ್ವಕ್ಕೂ ಮುನ್ನ ವಿಸ್ತ್ರತ ಪರಿಶೀಲನೆ

ಇಲ್ಲಿವರೆಗೆ ಆರ್.ಎಚ್. ಕ್ಯಾಂಪ್ ಗಳಲ್ಲಿ ವಾಸವಿರುವ 146 ಬಾಂಗ್ಲಾ ನಿರಾಶ್ರಿತರು ಸಿಎಎಯಡಿ ಪೌರತ್ವ ಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದಾರೆ. ಅಂಚೆ ಕಚೇರಿ, ರೈಲ್ವೆ ಮತ್ತು ಗುಪ್ತಚರ ಇಲಾಖೆಗಳ ನ್ನೊಳಗೊಂಡ ಜಿಲ್ಲಾಮಟ್ಟದ ಪರಿ ಶೀಲನಾ ಸಮಿತಿಯಿಂದ ಅರ್ಜಿಗಳ ಪರಿಶೀಲನೆ ನಡೆಸಿ, ವಾಸಸ್ಥಳ, ದಾಖಲೆಗಳನ್ನು ಪರಿಶೀಲಿಸಿ, ಪೌರತ್ವಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಅದನ್ನಾಧರಿಸಿ ಪೌರತ್ವ ಮಂಜೂರು ಮಾಡಲಾಗುತ್ತಿದೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ