
ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ MIO ನಲ್ಲಿ ಎಲ್ಲಾ ರೋಗಿಗಳಿಗೆ ಜಿಲ್ಲಾಸ್ಪತ್ರೆಯ ಮಾನ್ಯತಾ ಪತ್ರ ಇಲ್ಲದೆ ನೇರವಾಗಿ ದಾಖಲಾತಿಯಾಗುವಂತೆ ಅವಕಾಶ ಮಾಡಿಕೊಡಬೇಕು ಇತರೆ ರಾಜ್ಯದಿಂದ ಬಂದ ರೋಗಿಗಳಿಗೆ ಈ ಸೌಲಭ್ಯ ಈಗಾಗಲೇ ಇದ್ದು ನಮ್ಮ ರಾಜ್ಯದ ರೋಗಿಗಳಿಗೆ ಇದರಿಂದಾಗಿ ಸಮಸ್ಯೆ ಉಂಟಾಗುತಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ವಿನಂತಿಸಿಕೊಂಡು ಇದರ ಜೊತೆಗೆ ಆಯುಷ್ಮನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ 2022 ನೆಯ ಪರಿಷ್ಕೃತ ದರ ಪಟ್ಟಿಯನ್ನು ರಾಜ್ಯ ಸರ್ಕಾರವು ಬೇರೆ ರಾಜ್ಯಗಳ ಮಾದರಿಯಲ್ಲಿ ಅಂಗೀಕರಿಸಿ ಜಾರಿ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.