ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ