ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 23 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 24 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 216 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ