ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕೃಷಿ ಕಾರ್ಮಿಕರು…

    Spread the love

    You Missed

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 26 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 26 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 34 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 89 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 37 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ!