ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ ಕೆಲವು ಜನರ ಸಾಂತ್ವನ ನುಡಿ ಅಥವಾ ನಿಧಿ ಬಹಳ ಪ್ರಮುಖವೆನಿಸುತ್ತದೆ.


ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಕೊಂಬಿನಡ್ಕ ಮನೆ ಶ್ರೀ ಜಯಂತ ಪೂಜಾರಿಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ಎನ್ನುವ ಮಾರಕ ರೋಗಕ್ಕೆ ತುತ್ತಾಗಿ ಜೀವನ್ಮರಣದ ನಡುವೆ ಹೋರಾಟದ ಸ್ಥಿತಿಯಲ್ಲಿದ್ದಾರೆ. ಬದುಕಿನ ರಥ ಎಳೆಯಲು ತನ್ನ ಜೀವನೋಪಾಯಕ್ಕಾಗಿ ಗಾರೆ ಕೆಲಸ ಮಾಡುತ್ತಾ ಬಂದಿರುವ ಆದಾಯದಲ್ಲಿ ಹೆಂಡತಿ ವಸಂತಿ ಹಾಗೂ ತನ್ನ ಐದು ವರ್ಷದ ಮಗ ಮತ್ತು ಒಂದುವರೆ ವರ್ಷದ ಹೆಣ್ಣು ಮಗಳೊಂದಿಗೆ ಸುಖವಾಗಿ ಜೀವನ ಸಾಗಿಸುತ್ತಿದ್ದ ಈ ದಂಪತಿಗಳ ಬದುಕಿನಲ್ಲಿ ಬರಸಿಡಿಲಿನಂತೆ ಬಂದಪ್ಪಳಿಸಿದ ಮಹಾಮಾರಿಯೇ ಕ್ಯಾನ್ಸರ್ ಎನ್ನುವ ಮಾರಕ ಕಾಯಿಲೆ.

ಈ ಸಂಕಷ್ಟದ ವಿರುದ್ದ ಹೋರಾಡಲು‌ ಕಳೆದ ಎರಡು ವರ್ಷಗಳಿಂದ ಸಾಲಶೂಲ ಮಾಡಿ, ಸಂಬಂಧಿಕರಿಂದ, ದಾನಿಗಳಿಂದ ಸಹಾಯ ಪಡೆದು ಆರು ಲಕ್ಷಕ್ಕಿಂತಲೂ ಹೆಚ್ಚು ಚಿಕಿತ್ಸೆಗಾಗಿ ಖರ್ಚು ಮಾಡಿದ್ದಾರೆ. ಇಷ್ಟಾದರೂ ವಿಷಮಪರಿಸ್ಥಿತಿಯ ಕೈಗೊಂಬೆಯಾಗಿರುವ ಈ ಕುಟುಂಬಕ್ಕೆ ಮುಂದಿನ ಚಿಕಿತ್ಸೆಗೆ ಹಾಗೂ ಜೀವನೋಪಾಯಕ್ಕಾಗಿ ಹಣ ಹೊಂದಿಸಲಾಗದೇ ಕೈಚೆಲ್ಲಿ ಕುಳಿತಿದೆ ಈ ಕುಟುಂಬ. ಪತ್ನಿ ಬೀಡಿ ಕಟ್ಟಿ ಬಂದಿರುವ ಆದಾಯವು ಸಾಕಾಗದೇ ಮುಂದೇನು ಮಾಡಬೇಕೆನ್ನುವ ದಾರಿ ತೋಚದೇ ಕಂಗಲಾಗಿದ್ದಾರೆ.

ಪ್ರಸ್ತುತ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ವಾರಕ್ಕೊಮ್ಮೆ ಚಿಕಿತ್ಸೆಗೆ ಹೋಗಿ ಬರಲು ಪ್ರಯಾಣ ವೆಚ್ಚಕ್ಕೂ ಹಣದ ಕೊರತೆಯಾಗಿದೆ. ಇದೀಗ ಕೊಂಬಿನಡ್ಕ ಜಯಂತ ಪೂಜಾರಿಯವರಿಗೆ ಸಾವಿರಾರು ಸಹೃದಯ ಗೆಳೆಯರ ನೆರವಿನ ಆಸರೆ ಬೇಕಾಗಿದೆ.
ನಮ್ಮ ಕೈಲಾದ ನೆರವನ್ನು ನೊಂದ ಕುಟುಂಬಕ್ಕೆ ನೀಡಿ ಜಯಂತರ ಚಿಕಿತ್ಸೆಗೆ ನೆರವಾಗೋಣ.

ಸಹಾಯಧನ ಮಾಡಲಿಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆ ಸಂಖ್ಯೆಗೆ ಜಮಾಗೊಳಿಸಬಹುದು

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್ ಬಂಗಾಡಿ
A/c No : 01982200037445
IFSC Code : SYNB 000O198

ಜಯಂತ S/o ಗಿರಿಯಪ್ಪ ಪೂಜಾರಿ
ದೂ.ಸಂಖ್ಯೆ : 9900785019

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್…

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 33 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ